Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಪೀಕರ್ ವಿರುದ್ಧ ಏಕಪಕ್ಷಿಯ ಆರೋಪ: ಶಾಸಕರ ಅಸಮಾಧಾನ

ಬೆಂಗಳೂರು, ಜುಲೈ.22: ಮುಂಗಾರು ಅಧಿವೇಶನಲ್ಲಿ ಕಲಾಪ ನಡೆಸಿದ ವೈಖರಿ ಚ್ಯುತಿ ತರುವಂತಿದೆ. ವಿಪಕ್ಷಗಳಿಗೆ ಚರ್ಚೆಗೆ ಸಮಯ ನೀಡುತ್ತಿಲ್ಲ. ಸ್ಪೀಕರ್ ಏಕಪಕ್ಷಿಯವಾಗಿದ್ದಾರೆ ಎಂದು ಆರೋಪಿ ಕೆಲ ಶಾಸಕರು ಸ್ಪೀಕರ್ ಯು.ಟಿ. ಖಾದರ್  ಅವರಿಗೆ ಪತ್ರ ಬರೆದು ಅಸಮಾಧಾನ ಹೊರ ಹಾಕಿದ್ದಾರೆ. ಕಲಾಪದ ಮೇಲೆ ವಿರೋಧ ಪಕ್ಷಗಳಿಗೆ ಚರ್ಚೆ ಮಾಡಲು ಬಿಡದೆ ಸ್ವ ಪಕ್ಷ ಕಾಂಗ್ರೆಸ್​​ಗೆ ಹೆಚ್ಚಿನ ಆಧ್ಯತೆ ನೀಡಿದ್ದಾರೆ. ವಿಪಕ್ಷಗಳಿಗೆ ಅವಕಾಶವನ್ನೇ ನೀಡದಿರುವುದು ಪ್ರಜಾತ೦ತ್ರ ವ್ಯವಸ್ಥೆ ಅಪಾಯಕ್ಕೆ ಜಾರುತ್ತಿದೆಯೇನೋ ಎ೦ಬ ಅನುಮಾನ ಬರುವುದಕ್ಕೆ ಕಾರಣವಾಗಿದೆ ಎಂದು ಶಾಸಕರು ಪತ್ರ ಬರೆದು ಯುಟಿ ಖಾದರ್ ನಡೆಗೆ ಕಿಡಿಕಾರಿದ್ದಾರೆ.

ಸಂಸದೀಯ ವ್ಯವಹಾರ ಹಾಗೂ ಗುಣಮಟ್ಟದ ಕಲಾಪ ನಿರ್ವಹಣೆಯ ಕಾರಣಕ್ಕಾಗಿ ಕರ್ನಾಟಕ ವಿಧಾನಸಭೆ ಇಡೀ ದೇಶಕ್ಕೆ ಮಾದರಿಯಾಗಿದೆ. ಅತಿ ಹೆಚ್ಚು ಬಾರಿ ಗೆದ್ದ ಶಾಸಕರ ಪೈಕಿ ಒಬ್ಬರಾಗಿರುವ ನಿಮಗೆ ಇದು ತಿಳಿಯದ ಸ೦ಗತಿಯೇನು ಅಲ್ಲ. ಶ್ರೀ ವೈಕುಂಠ ಬಾಳಿಗರಿ೦ದ ಮೊದಲ್ಕೊಂಡು ಇಲ್ಲಿವರೆಗೆ ಸಭಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ ಪ್ರತಿಯೊಬ್ಬ ಸ್ಪೀಕರ್‌ ತಮ್ಮದೇ ಆದ ಶೈಲಿಯಲ್ಲಿ ಕರ್ತವ್ಯ ನಿರ್ವಹಿಸಿದರೂ ಅವರ ಉದ್ದೇಶ ಮಾತ್ರ ಗುಣಮಟ್ಟದ ಕಲಾಪದ ಜೊತೆಗೆ ಶಾಸನ ಸಭೆ ಜನಹಿತದ ಚರ್ಚೆಗೆ ಧ್ವನಿಯಾಗಬೇಕು ಎ೦ಬುದೇ ಆಗಿತ್ತು. ಕಾಂಗ್ರೆಸ್‌ ಪಕ್ಷದವರೇ ಆಗಿದ್ದರೂ ಸ್ಪೀಕರ್‌ ಸ್ಥಾನದಲ್ಲಿ ಕುಳಿತ ಹಿರಿಯರಾದ ಕಾಗೋಡು ತಿಮ್ಮಪ್ಪ, ರಮೇಶ್ ಕುಮಾರ್‌ ಈ ವಿಚಾರದಲ್ಲಿ ಇಡಿ ದೇಶಕ್ಕೆ ಮಾದರಿಯಾಗಿ ಸಭಾಧ್ಯಕ್ಷ ಸ್ಥಾನದ ಘನತೆಯನ್ನು ಎತ್ತಿ ಹಿಡಿದಿದ್ದರು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*