ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಾರಿ ಶಬರಿಮಲೆಯಲ್ಲಿ ಸ್ಪಾಟ್ ಬುಕ್ಕಿಂಗ್ ಇರುವುದಿಲ್ಲ. ಯಾತ್ರಿಗಳು ಬುಕ್ ಮಾಡದೆ ಬಂದರೆ ನಾವು ಪರಿಶೀಲಿಸುತ್ತೇವೆ.
ನಿಲಕ್ಕಲ್ ಮತ್ತು ಎರುಮೇಲಿಯಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ವಂ ಸಚಿವ ವಿಎನ್ ವಾಸವನ್ ಹೇಳಿದ್ದಾರೆ. ಯಾತ್ರಿಕರಿಗೆ ಬುಕಿಂಗ್ ಸಮಯದಲ್ಲಿ ಪ್ರಯಾಣದ ಮಾರ್ಗವನ್ನು ಆಯ್ಕೆ ಮಾಡುವ ಅವಕಾಶವನ್ನು ಒದಗಿಸಲಾಗುತ್ತದೆ. ಹೀಗಾಗಿ, ಯಾತ್ರಿಕರು ಕಡಿಮೆ ದಟ್ಟಣೆ ಇರುವ ಮಾರ್ಗವನ್ನು ಆಯ್ಕೆ ಮಾಡಬಹುದು.