LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ತೆರೆಗೆ ಬರಲಿದೆ ಆಪರೇಷನ್ ಡಿ









ತಿರುಮಲೇಶ್ ವಿ ನಿರ್ದೇಶನದ ಅದ್ವಿತ ಫಿಲಂ ಫ್ಯಾಕ್ಟರಿ  ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ 'ಆಪರೇಶನ್ ಡಿ' ಚಿತ್ರವನ್ನು 2026 ಫೆಬ್ರವರಿ ಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದ್ದಾರೆ.

      ಹಿಂದೆ ಬಿಡುಗಡೆಗೊಂಡಿದ್ದ ಟೀಸರ್ ಗೆ ಆಕ್ಷನ್ ಪ್ರಿನ್ಸ್ ದ್ರುವಸರ್ಜಾ ಅವರು ಜೊತೆಗೆ ನಿರ್ದೇಶಕ ಶ್ರೀನಿ, ನಟ ಸುದರ್ಶನ್ ರಂಗಪ್ರಸಾದ್ ಹಾಗೂ ಸಂಗೀತ ಭಟ್ ಸುದರ್ಶನ್ ತಮ್ಮ ಕಂಠದೊಂದಿಗೆ ಸಾಥ್ ನೀಡಿದ್ದರು

     'ಆಪರೇಷನ್ ಡಿ' ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಮರ್ಡರ್ ಮಿಸ್ಟರಿ ಕಥೆ ಆಧರಿಸಿದ ಚಿತ್ರ ಬಹುತೇಕ ರಂಗಭೂಮಿ ಕಲಾವಿದರೆ ಇದರಲ್ಲಿ ಅಭಿನಯಿಸಿದ್ದಾರೆ ಎನ್ನುವುದು ವಿಶೇಷ. ಚಿತ್ರದಲ್ಲಿ ನಾಲ್ಕು ಹಾಡುಗಳಿದೆ, ವೇದಿಕ ಕೆಂಪಗಿರಿ ತಿರುಮಲೇಶ್ ಹಾಡನ್ನು ಬರೆದಿದ್ದಾರೆ , ಭಗೀರ, ಡೆವಿಲ್, ಮಾರ್ಕ್ ಖ್ಯಾತಿಯ ಗಾಯಕ ಅನಿರುದ್ಧಶಾಸ್ತ್ರಿ ಅವರ ಮೊದಲ ಆಲ್ಬಮ್, ಈ ಸಿನಿಮಾದ ಮೂಲಕ ಅವರು ಒಂದೇ ಸಿನಿಮಾದಲ್ಲಿ 4 ಹಾಡನ್ನು ಹಾಡಿದ್ದಾರೆ ಇವರ ಜೊತೆ ಪೃಥ್ವಿಭಟ್ ಹಾಗೂ ವೇದಿಕ ಧ್ವನಿಗೂಡಿಸಿದ್ದಾರೆ

ವೇದಿಕ ಹಾಗೂ ಸಂತೋಷ್ ಆರ್ಮುಗಮ್ ಸಂಗೀತ ನಿರ್ದೇಶನ ಹಾಗೂ ರಾಹುಲ್ ಅರ್ಜ್ ಕಲಾ ಬಿಜಿಎಂ  ನೀಡಿದ್ದಾರೆ ,  ಭಾರ್ಗವಿ ಮುರಳಿ, ರಂಗನಾಥ್ ಹಾಗೂ ಸುರೇಶ್ ಅವರು ನಿರ್ಮಾಣದ ಹೊಣೆಯನ್ನು ಹೊತ್ತಿದ್ದಾರೆ

     ಚಿತ್ರದಲ್ಲಿ ರುದ್ರೇಶ್ ಬೂದನೂರು, ಸುಹಾಸ್ ಆತ್ರೇಯಸ್, ವಿನೋದ್ ದೇವ್, ಸ್ನೇಹ ಭಟ್, ಇಂಚರ ಭರತ್ ರಾಜ್, ಮಹೇಶ್ ಎಸ್ ಕಲಿ, ಶ್ರೀಧರ್, ಪೃಥ್ವಿ ಬನವಾಸಿ, ರೂಪ,  ಆಶಾ, ಧನಲಕ್ಷ್ಮೀ, ಶಿವಾನಂದ್,  ಸಂಚಯ ನಾಗರಾಜ್, ವೆಂಕಟಾಚಲ, ಸೂರ್ಯವಂಶಿ, ಶಿವಮಂಜು, ನಂಜಪ್ಪ ಎಸ್ ದೊಡ್ಡಮದುರೆ, ಶಿವಲಿಂಗು, ಕ್ರೇಜಿ ನಾಗರಾಜ್, ಜೂ.ನರಸಿಂಹರಾಜು ಹಾಗೂ ಮುಂತಾದವರು ನಟಿಸಿದ್ದಾರೆ.

     ಸಂಕಲನ ವಿಕ್ರಮ್ ಶ್ರೀಧರ್, ಛಾಯಾಗ್ರಾಹಣ ಕಾರ್ತಿಕ್ ಪ್ರಸಾದ್,

ಸಂಭಾಷಣೆ ರಾಜರವಿಶಂಕರ್, ನೃತ್ಯನಿರ್ದೇಶನ  ಜೈಹರಿಪ್ರಸಾದ್, ಕಲಾ ನಿರ್ದೇಶನ ತರ್ಮಾಕೋಲ್ ಶ್ರೀನಿವಾಸ್. "ಫೆಬ್ರವರಿ ಮೊದಲ ವಾರ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ನಡೆಯುತ್ತಿದೆ" ಎಂದು ನಿರ್ದೇಶಕ ತಿರುಮಲೇಶ್ ವಿ ತಿಳಿಸಿದ್ದಾರೆ































Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ