Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯತ್ನಾಳ್’ಗೆ ರಾಜಕೀಯ ಜೀವನ ಕೊಟ್ಟಿದ್ದೇ ನಮ್ಮ ಮನೆತನ: ವಿಜುಗೌಡ ಪಾಟೀಲ್

ವಿಜಯಪುರ: ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮೂಲತಃ ಮಹಾರಾಷ್ಟ್ರದವರಾಗಿದ್ದು ಇವರ ತಂದೆ ರಾಮನಗೌಡರು ಬೀಡಿ ಮಾರುತ್ತಿದ್ದರು. ಇವರ ಮನೆತನದ ಹೆಸರು ಧರ್ಮಕಡ್ಲಿ ಎಂದು ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ್ ಅವರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಯತ್ನಾಳ್’ಗೆ ರಾಜಕೀಯ ಜೀವನ ಕೊಟ್ಟಿದ್ದೇ ನಮ್ಮ ಮನೆತನ. ನಮ್ಮ ತಂದೆಯ ಕಾಲಿನ ಮಣ್ಣು ಸಹ ನೀವಾಗಲ್ಲ. ನಮ್ಮ ತಂದೆ ಬಗ್ಗೆ ಇನ್ನೊಂದು ಮಾತನಾಡಿದರೂ ಸುಮ್ಮನಿರಲ್ಲ. ತಾಕತ್ ಇದ್ದರೆ ಎದುರು-ಬದುರು ನಿಂತು ಮಾತನಾಡಲಿ ಎಂದು ಸವಾಲು ಹಾಕಿದರು.

ಯತ್ನಾಳರ ಅಜ್ಜನ ಹೆಸರು ಬಸನಗೌಡ. ಮೂಲತಃ ಮಹಾರಾಷ್ಟ್ರದ ಜತ್ತ ತಾಲೂಕಿನ ಕಾಗನೇರಿಯವರಾದ ಇವರ ಪುತ್ರ ರಾಮನಗೌಡ ಪಾನ್‌ಶಾಪ್ ಇರಿಸಿಕೊಂಡಿದ್ದರು. ಇವರ ಮನೆತನದ ಹೆಸರು ಧರ್ಮಕಡ್ಲಿ. ತಂದೆ ತೀರಿಕೊಂಡಾಗ ಹೊಡೆದಾಡಿ ಅವಮಾನಿಸಿ ಇವರು ಯಾವ ಸೀಮೆ ಪಾಟೀಲ? ಎಲ್ಲಿದೆ ಇವರ ಗೌಡಕಿ? ಗೌಡಕಿ ಪದದ ಅರ್ಥವಾದರೂ ಗೊತ್ತೆ? ಬನ್ನಿ ಗೌಡಕಿ ಎಂದರೆ ಹೇಗಿರುತ್ತದೆ ಎಂದು ನಾವು ತೋರಿಸುತ್ತೇವೆ.

ನಮ್ಮ ತಂದೆ ನಗರಸಭೆ ಅಧ್ಯಕ್ಷರಾಗಿ ಮಾಡಿದ ಕಾರ್ಯ ಇನ್ನೂ ಚಿರಸ್ಥಾಯಿಯಾಗಿದೆ. ನಾವೆಲ್ಲ ನಮ್ಮ ಅಪ್ಪಗೆ ಹುಟ್ಟಿದ್ದೇವೆ. ಅಂತೆಯೇ ನನ್ನಣ್ಣ ರಾಜೀನಾಮೆ ನೀಡಿ ಏನೆಂದು ಸಾಬೀತು ಪಡಿಸಿದ್ದಾನೆ. ಪಕ್ಷ ಬೇರೆಯಾದರೂ ಮನೆತನದ ವಿಚಾರಕ್ಕಾಗಿ ನಾನು ಈ ಮಾತು ಹೇಳಲೇಬೇಕಿದೆ. ನಮ್ಮ ಮನೆತನದ ಹೆಸರು ಹಚಡದ ಎಂದು ಹೇಳುವ ಯತ್ನಾಳ್ ತನ್ನ ಇತಿಹಾಸ ಅರಿಯಲಿ. ಅವರ ತಂದೆ ಬಗ್ಗೆ ನಾನು ಮಾತನಾಡಲ್ಲ. ಅವರ ಬಗ್ಗೆ ನಮಗೆ ಗೌರವವಿದೆ. ಈ ಯತ್ನಾಳರಂತೆ ರಾಮನಗೌಡರ ಹೆಸರಲ್ಲಿ ಡಬ್ಬಿ ಇಟ್ಟು ನಾವು ರೊಕ್ಕ ಎತ್ತಲ್ಲ, ದನದ ಹೆಸರಲ್ಲಿ ರೊಕ್ಕ ಎತ್ತಲ್ಲ, ಇಡೀ ರಾಜ್ಯದಲ್ಲಿಯೇ ನಮ್ಮ ಮನೆತನಕ್ಕೆ ಹೆಸರಿದೆ ಎಂದು ವಾಗ್ದಾಳಿ ನಡೆಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ