Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು ನಮ್ಮ ಮುಖ್ಯ ಆದ್ಯತೆ : ಪ್ರಿಯಾಂಕ ಜಾರಕಿಹೊಳಿ

ರಾಯಬಾಗ: ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು ನಮ್ಮ ಮುಖ್ಯ ಉದ್ದೇಶ ಮತ್ತು ಆದ್ಯತೆಯಾಗಿದೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಹೇಳಿದರು.

ಬುಧವಾರ ತಾಲೂಕಿನ ಮೊರಬ ಗ್ರಾಮದಲ್ಲಿ ಕುಡಚಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಎಸ್.ಸಿ.ಪಿ ಯೋಜನೆಯಡಿ ಮಂಜೂರಾದ 2 ಕೋಟಿ ರೂ.ವೆಚ್ಚದಲ್ಲಿ 15 ರಸ್ತೆ ಕಾಮಗಾರಿಗಳ ಹಾಗೂ ಟಿ.ಎಸ್.ಪಿ.ಯೋಜನೆಯಡಿ ಮಂಜೂರಾದ 50 ಲಕ್ಷ ರೂ. ವೆಚ್ಚದಲ್ಲಿ 5 ರಸ್ತೆ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ನಮ್ಮ ತಂದೆ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ ಜಾರಕಿಹೊಳಿಯವರು ಈ ಭಾಗದ ಅಭಿವೃದ್ಧಿಗಾಗಿ ತಮ್ಮ ಇಲಾಖೆಯಿಂದ ಈಗಾಗಲೇ ಸಾಕಷ್ಟು ಅನುದಾನ ಮಂಜೂರು ಮಾಡಿಸಿದ್ದಾರೆ, ರಾಯಬಾಗ-ಮೊರಬ ರಸ್ತೆ ಸುಧಾರಣೆಗೆ ಕೂಡ ಅನುದಾನ ಮಂಜೂರು ಮಾಡಿಸಿದ್ದಾರೆ.

ಈ ಭಾಗದಲ್ಲಿ ಬೇಸಿಗೆಯಲ್ಲಿ ನೀರಿನ ಅಭಾವ ನೀಗಿಸಲು ಕೆನಾಲಗಳಿಗೆ ನೀರು ಹರಿಸಿ ಜನ ಜಾನುವಾರುಗಳಿಗೆ ಅನುಕೂಲ ಮಾಡಿದ್ದಾರೆ. ಜಿಲ್ಲೆಯ ಜನರ ಆಶೀರ್ವಾದಿಂದ ಹೊಸ ಸಚಿವ ಸಂಪುಟದಲ್ಲಿ ಮತ್ತೆ ಸಚಿವ ಸ್ಥಾನ ದೊರಕಿದೆ ಎಂದು ಹೇಳಿದರು. ಹಿರಿಯ ಮುಖಂಡರಾದ ಡಿ.ಎಸ್.ನಾಯಿಕ, ಸಂಜೀವಕುಮಾರ ಬಾನೆಸರಕಾರ, ವಕೀಲರಾದ ರಾಜು ಶಿರಗಾಂವೆ, ಹಿಂದುಳಿದ ವರ್ಗ ಕಲ್ಯಾಣ ಇಲಾಖೆ ತಾಲೂಕಾಧಿಕಾರಿ ಕಲ್ಪನಾ ಕಾಂಬಳೆ, ಪಿಡಿಒ ರೂಪಾ ಸವದಿ,ಸಜ್ಜನ ರೋಹಿಲೆ, ಜಯದೇವ ಸನದಿ, ಸದಾಶಿವ ಗಡ್ಡೆ, ಶಂಬಾಜಿ ಶಿಂದೆ, ಉಮೇಶ್ ಅಸೋದೆ, ಹನುಮಂತ ಅಸೋದೆ ಸೇರಿ ಅನೇಕರು ಇದ್ದರು. 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ವರ ಪ್ರೀತಿಗೆ ಪಾತ್ರರಾದವರು ಡಾ.ಆರ್.ಎಸ್‌.ಕಲ್ಲೂರಮಠಕಾಗವಾಡ:ನೆರೆ ಹಾವಳಿ ತಡೆಗೆ ಪೂರ್ವಭಾವಿ ಸಭೆ; ಅಧಿಕಾರಿಗಳೇ ಕೇಂದ್ರ ಸ್ಥಾನದಲ್ಲಿಯೇ ಇರಿ: ತಹಶೀಲ್ದಾರ ರವೀಂದ್ರ ಹಾದಿಮನಿ ಸೂಚನೆ..!ಡಾ. ಹೆಚ್. ಸಿ. ಮಹಾದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹ* ಬಿಜೆಪಿಯ ಕೇಂದ್ರ ಸರ್ಕಾರ ಸಧೃಢ ಭಾರತ ನಿರ್ಮಿಸುತ್ತಿದೆ : ಮಹಾದೇವ ಶೇಕ್ಕಿಸಚಿವ ಸ್ಥಾನ ಇಲ್ಲದಿದ್ದರೂ ಜನಸ್ಪಂದನೆ ಅಚಲ: ಲಕ್ಷ್ಮೀ ಹೆಬ್ಬಾಳಕರ್ ಜನತಾ ದರ್ಶನದಲ್ಲಿ ಅಪಾರ ಜನಸಾಗರಜನರ ಮನ ರಂಜಿಸಿದ ತೊಗಲು ಗೊಂಬೆಯಾಟ, ಜನಪದ ಸಂಗೀತಮುನ್ನಚ್ಚರಿಕಾ ಕ್ರಮ ಕೈಗೊಳ್ಳಲು ಶಾಸಕ ಉಮೇಶ ಮೇಟಿ ಸೂಚನೆಅಕ್ರಮ ಅದಿರು ದಾಸ್ತಾನು, ಮಣ್ಣು ಸಾಗಣೆಗೆ ಲಂಚ ಆರೋಪ: ಸಿಪಿಐ ಉದಯರವಿ ಅಮಾನತುವೃದ್ದಾಶ್ರಮಕ್ಕೆ ಅಕ್ಕಿ, ಬೆಳೆ ವಿತರಿಸಿ ಹುಟ್ಟಹಬ್ಬ ಆಚರಿಸಿಕೊಂಡ ದಸ್ತಗಿರಸಾಬ ನಿಟ್ಟಾಲಿ