ಇಂದು ನಡೆದ ಪದ್ಮ ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮದಲ್ಲಿ 71 ವ್ಯಕ್ತಿಗಳನ್ನು ಸನ್ಮಾನಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಗಮನಾರ್ಹ ಕೊಡುಗೆ ಮತ್ತು ಕೆಲಸಕ್ಕಾಗಿ 71 ಗಣ್ಯ ವ್ಯಕ್ತಿಗಳಿಗೆ ರಾಷ್ಟ್ರಪತಿಗಳು ಪದ್ಮ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಕರ್, ಕೇಂದ್ರ ಸಚಿವರಾದ ಅಮಿತ್ ಶಾ, ಎಸ್ ಜೈಶಂಕರ್, ಪ್ರಹ್ಲಾದ್ ಜೋಶಿ, ಜಿತೇಂದ್ರ ಸಿಂಗ್, ಜಿ ಕಿಶನ್ ರೆಡ್ಡಿ ಮತ್ತು ಇತರ ಹಲವಾರು ಸಚಿವರು ಮತ್ತು ಗಣ್ಯರು ಉಪಸ್ಥಿತರಿದ್ದರು.