ಪಾಕಿಸ್ತಾನ ಎರಡು ಕಡೆ ಯುದ್ಧಕ್ಕೆ ಸಿದ್ಧವಾಗಿದೆ, ಭಾರತ ಗಡಿಯಲ್ಲಿ “ಕೊಳಕು ಆಟವಾಡುವ” ಸಾಧ್ಯತೆ ಹೆಚ್ಚಿದೆ ಎಂದು ಹೇಳಿದ್ದಾರೆ. ಮಾಧ್ಯಮ ಈ ಬಗ್ಗೆ ಅವರನ್ನು ಪ್ರಶ್ನೆ ಮಾಡಿದೆ. ಭಾರತ ಗಡಿಯಲ್ಲಿ ಯಾವೆಲ್ಲ ಚಟುವಟಿಕೆಯನ್ನು ಮಾಡುತ್ತಿದೆ ಎಂದು ಕೇಳಿದ್ದರೆ, ಆದರೆ ಅದಕ್ಕೆ ಪಾಕ್ ರಕ್ಷಣಾ ಸಚಿವನ ಉತ್ತರ ಇಲ್ಲ. ಈ ಬಗ್ಗೆ ನಾನು ಏನು ಹೇಳಲು ಸಾಧ್ಯವಿಲ್ಲ, ತಂತ್ರಗಳು ಈಗಾಗಲೇ ಜಾರಿಯಲ್ಲಿವೆ ಎಂದು ಹೇಳಿದ್ದಾರೆ.
ಕಾಬೂಲ್ ಮತ್ತು ಕಂದಹಾರ್ನಲ್ಲಿರುವ ಟಿಟಿಪಿ (ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್) ಶಿಬಿರಗಳ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದ ನಂತರ ತಾಲಿಬಾನ್ ಜತೆಗೆ ಮತ್ತಷ್ಟು ದ್ವೇಷ ಕಟ್ಟಿಕೊಂಡಿದೆ. ಪಾಕ್ ಮಾಡಿದ ದಾಳಿಗೆ ತಾಲಿಬಾನ್ ಕೂಡ ಪ್ರತಿಕಾರವಾಗಿ ದಾಳಿಯನ್ನು ನಡೆಸಿದೆ. ಈ ದಾಳಿಯನ್ನು ತಾಲಿಬಾನ್ 58 ಪಾಕಿಸ್ತಾನಿ ಸೈನಿಕರನ್ನು ಕೊಂದಿದೆ ಮತ್ತು ಟ್ಯಾಂಕ್ಗಳು ಸೇರಿದಂತೆ ಮಿಲಿಟರಿ ಉಪಕರಣಗಳನ್ನು ವಶಪಡಿಸಿಕೊಂಡಿದೆ. ದಾಳಿಗಳಲ್ಲಿ 200 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕ್ ಹೇಳಿಕೊಂಡಿದೆ. ಕೆಲವು ದಿನಗಳ ಹಿಂದೆ ಸೌದಿ ಅರೇಬಿಯಾ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ತಾಲಿಬಾನ್ ನಡುವೆ ಕದನ ವಿರಾಮ ಪ್ರಯತ್ನ ಮಾಡಲಾಗಿತ್ತು. ಆದರೆ ಈ ಮಧ್ಯಸ್ಥಿಕೆ ವಿಫಲಗೊಂಡಿದೆ. ಪಾಕ್ – ಅಫ್ಘಾನಿಸ್ತಾನದ ನಡುವಿನ ಸಂಘರ್ಷದ ವೇಳೆ ತಾಲಿಬಾನ್ ಹೋರಾಟಗಾರರು, ಪಾಕಿಸ್ತಾನಿ ಟ್ಯಾಂಕ್ಗಳಲ್ಲಿ ಮೆರವಣಿಗೆ ನಡೆಸಿದ್ದಾರೆ. ತಾಲಿಬಾನ್ ಜತೆಗೆ ಸಂಘರ್ಷ ಮಾಡಲಾಗದೇ ಪಾಕ್ ಸೈನಿಕರು ಪಲಾಯನ ಮಾಡಿದ್ದಾರೆ. ಈ ಬಗ್ಗೆ ವಿಡಿಯೋ ಕೂಡ ವೈರಲ್ ಆಗಿತ್ತು. ಈ ವಿಡಿಯೋ ಪಾಕ್ ಸಾರ್ವಜನಿಕರಿಗೆ ಮುಜುಗರ ಉಂಟು ಮಾಡಿದೆ.