ಪಾಕಿಸ್ತಾನಿ ಸೈನಿಕರು ಮತ್ತು ಒಳನುಸುಳುಕೋರರು ಗುಂಡು ಹಾರಿಸಲು ಪ್ರಾರಂಭಿಸಿದರು, ಇದಕ್ಕೆ ಭಾರತೀಯ ಸೇನೆಯು ಸೂಕ್ತ ಪ್ರತ್ಯುತ್ತರ ನೀಡಿತು. ಮೂಲಗಳ ಪ್ರಕಾರ, ಪಾಕಿಸ್ತಾನ ಸೇನೆಯ ನಾಲ್ಕರಿಂದ ಐದು ನುಸುಳುಕೋರರು ಸಾವನ್ನಪ್ಪಿದ್ದಾರೆ, ಆದರೂ ಇದನ್ನು ಇನ್ನೂ ಅಧಿಕೃತವಾಗಿ ದೃಢಪಡಿಸಲಾಗಿಲ್ಲ. ಈ ಘರ್ಷಣೆಯಲ್ಲಿ ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ನಷ್ಟವಾಗಿಲ್ಲ ಎಂದು ಭಾರತೀಯ ಸೇನೆ ತಿಳಿಸಿದೆ.
ದಿನವಿಡೀ ನಿರಂತರ ಗುಂಡಿನ ಚಕಮಕಿ ಮುಂದುವರೆದಿದ್ದು, ಕೃಷ್ಣ ಘಾಟಿ ಪ್ರದೇಶದಲ್ಲಿ ಭಾರತೀಯ ಸೇನೆಯನ್ನು ಸಂಪೂರ್ಣವಾಗಿ ನಿಯೋಜಿಸಲಾಗಿದೆ. ಕಳೆದ ಎರಡು ತಿಂಗಳುಗಳಲ್ಲಿ ನಿಯಂತ್ರಣ ರೇಖೆಯ (ಎಲ್ಒಸಿ) ದಕ್ಷಿಣ ಪಿರ್ ಪಂಜಾಲ್ ವಲಯದಲ್ಲಿ ಗಡಿಯಾಚೆಗಿನ ಗುಂಡಿನ ದಾಳಿ ಘಟನೆಗಳಲ್ಲಿ ತೀವ್ರ ಏರಿಕೆ ಕಂಡುಬಂದಿದೆ.