Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿ ಪತ್ರಕ್ಕೆ ಪ್ಯಾಲೆಸ್ಟೈನ್​​ ​ರಾಯಭಾರಿ ಕಚೇರಿ ಅಧಿಕಾರಿ ಮೆಚ್ಚುಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ಟೈನ್​​ ಜನರೊಂದಿಗೆ ಐಕಮತ್ಯದ ಅಂತಾರಾಷ್ಟ್ರೀಯ ದಿನದ ಸಂದರ್ಭದಲ್ಲಿ ಬರೆದ ಪತ್ರಕ್ಕೆ ಭಾರತದಲ್ಲಿನ ಪ್ಯಾಲೆಸ್ಟೈನ್​​ ​ ರಾಯಭಾರಿ ಕಚೇರಿಯ ಪ್ರಭಾರ ಅಧಿಕಾರಿ ಅಬೇದ್ ಎಲ್ರಾಜೆಗ್ ಅಬು ಜಾಜರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಪ್ಯಾಲೆಸ್ಟೈನ್​​ ​ ರಾಷ್ಟ್ರದ ಸ್ಥಾಪನೆಗೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ ಮತ್ತು ಪ್ಯಾಲೆಸ್ಟೈನ್​ಗೆ ಮಾನವೀಯ ನೆರವು ನೀಡುವ ಭಾರತದ ಬದ್ಧತೆಯನ್ನು ಸ್ವಾಗತಿಸಿದ್ದಾರೆ. ಪ್ಯಾಲೆಸ್ಟೈನ್​​ ​ ಜನರೊಂದಿಗೆ ಐಕ್ಯತೆಯ ಅಂತಾರಾಷ್ಟ್ರೀಯ ದಿನದ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಸಂದೇಶವನ್ನು ನಾವು ಸ್ವಾಗತಿಸುತ್ತೇವೆ ಮತ್ತು ಹೆಚ್ಚು ಪ್ರಶಂಸಿಸುತ್ತೇವೆ ಎಂದಿದ್ದಾರೆ.


ಪ್ರಧಾನಮಂತ್ರಿಯವರ ಸಂದೇಶವು ಪ್ರಮುಖ ಅಂಶವನ್ನು ಒಳಗೊಂಡಿದ್ದು, ಪ್ಯಾಲೆಸ್ಟೈನಿಯನ್​​ ​​ ಜನರು ಸಾಧಿಸಲು ಪ್ರಯತ್ನಿಸುತ್ತಿರುವ ರಾಜತಾಂತ್ರಿಕ ಮತ್ತು ರಾಜಕೀಯ ಮಾರ್ಗದ ಮೂಲಕ ಕಾರ್ಯಸಾಧ್ಯವಾದ ಪ್ಯಾಲೆಸ್ಟೈನ್​​ ರಾಜ್ಯ ಮತ್ತು ಎರಡು-ರಾಜ್ಯಗಳ ಸ್ಥಾಪನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.


ಹಾಗೇ, ಗಾಜಾ ಮೇಲಿನ ಇಸ್ರೇಲಿ ಯುದ್ಧವನ್ನು ನಿಲ್ಲಿಸಲು ತಕ್ಷಣದ ಕದನ ವಿರಾಮಕ್ಕೆ ಭಾರತೀಯ ಪ್ರಧಾನ ಮಂತ್ರಿಯವರ ಕರೆಯನ್ನು ನಾವು ಬೆಂಬಲಿಸುತ್ತೇವೆ. ಜೊತೆಗೆ ಪ್ಯಾಲೆಸ್ಟೈನ್​​ ಜನರಿಗೆ ಮಾನವೀಯ ನೆರವು ನೀಡುವುದನ್ನು ಮುಂದುವರಿಸುವ ಭಾರತದ ಬದ್ಧತೆಯನ್ನು ನಾವು ಸ್ವಾಗತಿಸುತ್ತೇವೆ. ಪ್ಯಾಲೆಸ್ಟೈನ್​​ ​ ಜನರ ದೈನಂದಿನ ಜೀವನದಲ್ಲಿ ನಿಖರವಾದ ಬದಲಾವಣೆಯನ್ನು ತರಲು ವಿಶ್ವಸಂಸ್ಥೆಗೆ ತನ್ನ ನಿರಂತರ ಬೆಂಬಲವನ್ನು ಭಾರತವು ದೃಢಪಡಿಸುತ್ತದೆ ಎಂದು ನಾವು ನಂಬುತ್ತೇವೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ