ಅ. 22ರಂದು ಅಖಿಲ ಭಾರತ ವೀರಶೈವ ಮಹಾಸಭಾ ಸಭೆ: ಸಿಎಂ ನೇತೃತ್ವದಲ್ಲಿ ಸಭೆ ಒಂದೆಡೆಯಾದರೆ, ಅತ್ತ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ. ಇದೇ ಅಕ್ಟೋಬರ್ 22 ರಂದು ಬೆಂಗಳೂರಲ್ಲಿ ಜಾತಿ ಗಣತಿ ವರದಿಯ ಸಾಧಕ-ಬಾಧಕ ಕುರಿತು ಚರ್ಚಿಸಲು ಸಭೆ ಆಯೋಸಜಿಲಾಗಿದೆ. ಈ ಸಭೆಗೆ ಬರುವಂತೆ ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲಾಗಿದೆ. ಇವರ ಜತೆಗೆ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿ ನಿಯೋಗಕ್ಕೂ ಸಭೆಗೆ ಬರುವಂತೆ ಆಹ್ವಾನಿಸಿದ್ದಾರೆ.
ಜಾತಿ ಗಣತಿ ಕುರಿತು ಸರ್ಕಾರದೊಳಗೆ ಅಪಸ್ವರ ಕೇಳಿ ಬಂದಿತ್ತು. ಆದರೆ, ಇನ್ನೊಂದು ಬಣ ಜಾತಿ ಗಣತಿ ಜಾರಿ ಮಾಡುವಂತೆ ಪಟ್ಟು ಹಿಡಿದಿದೆ. ಇದರ ನಡುವೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಕರೆದಿರುವ ಸಭೆ ಮಹತ್ವದ ಪಡೆದಿದೆ.