ಬಳ್ಳಾರಿ, ಮೇ 05: ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ನಗರದಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ನಗರದ ಗಾಂಧಿ ವೃತ್ತದಲ್ಲಿ ನೂರಾರು ಕಾರ್ಯಕರ್ತರು ಸೇರಿ ಘೋಷಣೆಗಳನ್ನು ಕೂಗುತ್ತಾ, ಪಟಾಕಿ ಸಿಡಿಸಿ ಭಾರತ ಮಾತಾ ಕೀ ಜೈ ಬಿಜೆಪಿ ಜಿಂದಾಬಾದ್ ಎಂದು ಘೋಷಣೆಗಳೊಂದಿಗೆ ಸಂಭ್ರಮಿಸಿದರು. ಇದೇ ವೇಳೆ ಗಾಂಧೀಜಿಯವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಸಿಹಿ ಹಂಚುವ ಮೂಲಕ ವಿಜಯೋತ್ಸವವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಎಸ್. ಸಿದ್ದಪ್ಪ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ವೀರಣಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮನಗೌಡ, ನಗರಸಭೆ ಸದಸ್ಯರಾದ ಮೆಕ್ಯಲಿ ವೀರೇಶ್, ಮೋಹನ್ ರೆಡ್ಡಿ, ಮಹದೇವಪ್ಪ, ಬಿ.ಜಿ. ಹುಲಗಪ್ಪ, ಮುದಿಯಪ್ಪ, ಅಂಜಿ, ಗಾದಿಲಿಂಗ, ಬಸವರಾಜ, ಗಂಗಾಧರ, ದೇವೇಂದ್ರ, ಹುಲುಗಪ್ಪ, ರಾಜ ವೀರೇಶ, ದ್ಯಾಮನಗೌಡ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.