LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸಂಸದೀಯ ಬಜೆಟ್​ ಅಧಿವೇಶನ ಜನವರಿ 31ರಿಂದ ಆರಂಭ!

ನವದೆಹಲಿ: ಸಂಸದೀಯ ಬಜೆಟ್​ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದ್ದು, ಏಪ್ರಿಲ್​ 4ರವರೆಗೆ ನಡೆಯಲಿದೆ. ಫೆ. 1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡಿಸಲಿದ್ದು, ಇದು ಅವರ ಏಂಟನೇ ಬಜೆಟ್​ ಮಂಡನೆಯಾಗಿದೆ.


ಬಜೆಟ್​ ಅಧಿವೇಶನದ ಮೊದಲ ದಿನ ಜನವರಿ 31ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಂಸತ್​ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣೆ ಮಾಡಲಿದ್ದು, ಆರ್ಥಿಕ ಸಮೀಕ್ಷೆ ಮಂಡನೆ ಕೂಡ ಆಗಲಿದೆ.


ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದೀಯ ಸಚಿವ ಕಿರಣ್​ ರಿಜುಜ್​​, ಗೌರವಾನ್ವಿತ ರಾಷ್ಟ್ರಪತಿಗಳು 2025ರ ಜನವರಿ 31ರಂದು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 2025-26ನೇ ಸಾಲಿನ ಕೇಂದ್ರ ಬಜೆಟ್​ ಅನ್ನು ಫೆ 1ರಂದು ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.


ಬಜೆಟ್​​ ಅಧಿವೇಶನದ ಮೊದಲ ಭಾಗ ಜನವರಿ 31ರಿಂದ ಫೆಬ್ರವರಿ 13ರವರೆಗೆ 9ದಿನಗಳ ಕಾಲ ನಡೆಯಲಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ಸಲ್ಲಿಸಲಿದ್ದು, ಸೀತಾರಾಮನ್​ ಅವರು ಬಜೆಟ್​ ಚರ್ಚೆಗೆ ಉತ್ತರಿಸಲಿದ್ದಾರೆ.


ಬಜೆಟ್ ಪ್ರಸ್ತಾವನೆಗಳನ್ನು ಪರಿಶೀಲಿಸಲು ಸಂಸತ್​​ ವಿರಾಮ ಪಡೆಯಲಿದ್ದು, ಮತ್ತೆ ಮಾರ್ಚ್​ 10ರಿಂದ ಆರಂಭವಾಗಲಿದ್ದು, ಈ ವೇಳೆ ಬಜೆಟ್​​ ಪ್ರಸ್ತಾವನೆಗಳ ಪೂರ್ಣಗೊಳಿಸುವುವಿಕೆ ಹಾಗೂ ನಿಧಿ ಹಂಚಿಕೆ ಬೇಡಿಕೆ ವಿಚಾರದಲ್ಲಿ ಚರ್ಚೆಗಳು ಸಾಗಲಿದೆ. ಈ ಅಧಿವೇಶನ ಏಪ್ರಿಲ್​ 4ರಂದು ಪೂರ್ಣಗೊಳ್ಳಲಿದ್ದು, ಒಟ್ಟು 27 ದಿನ ಸಾಗಲಿದೆ. (ಪಿಟಿಐ)

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ