Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಸದೀಯ ಬಜೆಟ್​ ಅಧಿವೇಶನ ಜನವರಿ 31ರಿಂದ ಆರಂಭ!

ನವದೆಹಲಿ: ಸಂಸದೀಯ ಬಜೆಟ್​ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದ್ದು, ಏಪ್ರಿಲ್​ 4ರವರೆಗೆ ನಡೆಯಲಿದೆ. ಫೆ. 1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡಿಸಲಿದ್ದು, ಇದು ಅವರ ಏಂಟನೇ ಬಜೆಟ್​ ಮಂಡನೆಯಾಗಿದೆ.


ಬಜೆಟ್​ ಅಧಿವೇಶನದ ಮೊದಲ ದಿನ ಜನವರಿ 31ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಂಸತ್​ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣೆ ಮಾಡಲಿದ್ದು, ಆರ್ಥಿಕ ಸಮೀಕ್ಷೆ ಮಂಡನೆ ಕೂಡ ಆಗಲಿದೆ.


ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದೀಯ ಸಚಿವ ಕಿರಣ್​ ರಿಜುಜ್​​, ಗೌರವಾನ್ವಿತ ರಾಷ್ಟ್ರಪತಿಗಳು 2025ರ ಜನವರಿ 31ರಂದು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 2025-26ನೇ ಸಾಲಿನ ಕೇಂದ್ರ ಬಜೆಟ್​ ಅನ್ನು ಫೆ 1ರಂದು ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.


ಬಜೆಟ್​​ ಅಧಿವೇಶನದ ಮೊದಲ ಭಾಗ ಜನವರಿ 31ರಿಂದ ಫೆಬ್ರವರಿ 13ರವರೆಗೆ 9ದಿನಗಳ ಕಾಲ ನಡೆಯಲಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ಸಲ್ಲಿಸಲಿದ್ದು, ಸೀತಾರಾಮನ್​ ಅವರು ಬಜೆಟ್​ ಚರ್ಚೆಗೆ ಉತ್ತರಿಸಲಿದ್ದಾರೆ.


ಬಜೆಟ್ ಪ್ರಸ್ತಾವನೆಗಳನ್ನು ಪರಿಶೀಲಿಸಲು ಸಂಸತ್​​ ವಿರಾಮ ಪಡೆಯಲಿದ್ದು, ಮತ್ತೆ ಮಾರ್ಚ್​ 10ರಿಂದ ಆರಂಭವಾಗಲಿದ್ದು, ಈ ವೇಳೆ ಬಜೆಟ್​​ ಪ್ರಸ್ತಾವನೆಗಳ ಪೂರ್ಣಗೊಳಿಸುವುವಿಕೆ ಹಾಗೂ ನಿಧಿ ಹಂಚಿಕೆ ಬೇಡಿಕೆ ವಿಚಾರದಲ್ಲಿ ಚರ್ಚೆಗಳು ಸಾಗಲಿದೆ. ಈ ಅಧಿವೇಶನ ಏಪ್ರಿಲ್​ 4ರಂದು ಪೂರ್ಣಗೊಳ್ಳಲಿದ್ದು, ಒಟ್ಟು 27 ದಿನ ಸಾಗಲಿದೆ. (ಪಿಟಿಐ)
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ