Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಸದೀಯ ಬಜೆಟ್​ ಅಧಿವೇಶನ ಜನವರಿ 31ರಿಂದ ಆರಂಭ!

ನವದೆಹಲಿ: ಸಂಸದೀಯ ಬಜೆಟ್​ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದ್ದು, ಏಪ್ರಿಲ್​ 4ರವರೆಗೆ ನಡೆಯಲಿದೆ. ಫೆ. 1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡಿಸಲಿದ್ದು, ಇದು ಅವರ ಏಂಟನೇ ಬಜೆಟ್​ ಮಂಡನೆಯಾಗಿದೆ.


ಬಜೆಟ್​ ಅಧಿವೇಶನದ ಮೊದಲ ದಿನ ಜನವರಿ 31ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಂಸತ್​ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣೆ ಮಾಡಲಿದ್ದು, ಆರ್ಥಿಕ ಸಮೀಕ್ಷೆ ಮಂಡನೆ ಕೂಡ ಆಗಲಿದೆ.


ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದೀಯ ಸಚಿವ ಕಿರಣ್​ ರಿಜುಜ್​​, ಗೌರವಾನ್ವಿತ ರಾಷ್ಟ್ರಪತಿಗಳು 2025ರ ಜನವರಿ 31ರಂದು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 2025-26ನೇ ಸಾಲಿನ ಕೇಂದ್ರ ಬಜೆಟ್​ ಅನ್ನು ಫೆ 1ರಂದು ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement

ಬಜೆಟ್​​ ಅಧಿವೇಶನದ ಮೊದಲ ಭಾಗ ಜನವರಿ 31ರಿಂದ ಫೆಬ್ರವರಿ 13ರವರೆಗೆ 9ದಿನಗಳ ಕಾಲ ನಡೆಯಲಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ಸಲ್ಲಿಸಲಿದ್ದು, ಸೀತಾರಾಮನ್​ ಅವರು ಬಜೆಟ್​ ಚರ್ಚೆಗೆ ಉತ್ತರಿಸಲಿದ್ದಾರೆ.


ಬಜೆಟ್ ಪ್ರಸ್ತಾವನೆಗಳನ್ನು ಪರಿಶೀಲಿಸಲು ಸಂಸತ್​​ ವಿರಾಮ ಪಡೆಯಲಿದ್ದು, ಮತ್ತೆ ಮಾರ್ಚ್​ 10ರಿಂದ ಆರಂಭವಾಗಲಿದ್ದು, ಈ ವೇಳೆ ಬಜೆಟ್​​ ಪ್ರಸ್ತಾವನೆಗಳ ಪೂರ್ಣಗೊಳಿಸುವುವಿಕೆ ಹಾಗೂ ನಿಧಿ ಹಂಚಿಕೆ ಬೇಡಿಕೆ ವಿಚಾರದಲ್ಲಿ ಚರ್ಚೆಗಳು ಸಾಗಲಿದೆ. ಈ ಅಧಿವೇಶನ ಏಪ್ರಿಲ್​ 4ರಂದು ಪೂರ್ಣಗೊಳ್ಳಲಿದ್ದು, ಒಟ್ಟು 27 ದಿನ ಸಾಗಲಿದೆ. (ಪಿಟಿಐ)

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*