Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಐಆರ್‌ನಲ್ಲಿ ಭಾಗವಹಿಸಿ; ಸರ್ಕಾರಿ ಸೌಲಭ್ಯಗಳನ್ನು ಪಡೆಯಿರಿ ; ಲಿಡ್ಕರ್ ಅಧ್ಯಕ್ಷ ಮುಂಡರಿಗಿ ನಾಗರಾಜ್ ಕರೆ 

ಬಳ್ಳಾರಿ, ಜು. 02: ಸರ್ಕಾರದ ವಿವಿಧ ಸೌಲಭ್ಯಗಳು, ಅದರಲ್ಲೂ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಪ್ರತಿಯೊಬ್ಬ ಅರ್ಹ ಮತದಾರರೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡ್ರಿಗಿ ನಾಗರಾಜ್ ಕರೆ ನೀಡಿದರು.
ನಗರದ ಕೋಟೆ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ  ತಮ್ಮ ಹಾಗೂ ಕುಟುಂಬದ ಸದಸ್ಯರ ಎನ್ಯುಮರೇಷನ್ ಫಾರ್ಮ್ ಭರ್ತಿ ಮಾಡಿ ಬಿ ಎಲ್ ಓ ಗೆ ಸಲ್ಲಿಸಿದ ಬಳಿಕ ಮಾತನಾಡಿ, 
ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ಉದ್ದೇಶದಿಂದ ಚುನಾವಣಾ ಆಯೋಗ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನ ಕೈಗೊಂಡಿದೆ. ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರೂ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಸೇರಿದಂತೆ ಬೇಕಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಈ ವೇಳೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಆಧಾರ್ ಜೋಡಣೆ, ಭಾವಚಿತ್ರದ ಸ್ಪಷ್ಟತೆ ಹಾಗೂ ಎಸ್‌ಐಆರ್ ಮಾರ್ಗಸೂಚಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಜಾಗೃತಿ ಮೂಡಿಸಿದರು.
ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರವನ್ನು ಅರ್ಜಿಗೆ ಅಂಟಿಸುವಾಗ ಬಣ್ಣದ ಭಾವಚಿತ್ರವನ್ನು ನೀಡಬೇಕು 
 ಭಾವಚಿತ್ರದಲ್ಲಿನ ಉಡುಪಿನ ಬಣ್ಣ ಮತ್ತು ಹಿನ್ನಲೆಯ ಬಣ್ಣ ಒಂದೇ ರೀತಿಯಾಗಿರಬಾರದು. ಇದರಿಂದ ಮತದಾರರ ಪಟ್ಟಿಯಲ್ಲಿ ಭಾವಚಿತ್ರ ಸ್ಪಷ್ಟವಾಗಿ ಮುದ್ರಣವಾಗಲು ಅಸ್ಪಷ್ಟತೆ ಉಂಟಾಗುತ್ತದೆ  ಎಂದು ಸಲಹೆ ನೀಡಿದರು.
 ಈ ಸಂದರ್ಭದಲ್ಲಿ  ಸಹಾಯಕ ಆಯುಕ್ತ  ರಾಜೇಶ್ ಮಾತನಾಡಿ ಯಾವೊಬ್ಬ ಅರ್ಹ ಮತದಾರರು ಮತದಾರ ಪಟ್ಟಿಯಿಂದ ಹೊರಗೂಳಿಯಬಾರದು ಹಾಗೆಯೇ ಅನರ್ಹರು ಮತದಾರ ಪಟ್ಟಿಯಲ್ಲಿ ಇರಬಾರದು ಎಂಬ ಸದುದ್ದೇಶದಿಂದ ಚುನಾವಣಾ ಆಯೋಗ 24 ವರ್ಷಗಳ ನಂತರ ಈಗ ವಿಶೇಷ ಮತದಾರರ ಪರಿಷ್ಕರಣೆಯನ್ನು ಹಮ್ಮಿಕೊಂಡಿದೆ ಎಲ್ಲರೂ ಇದರಲ್ಲಿ ಭಾಗವಹಿಸಿ ಏನು ಫಾರಂ ಭರ್ತಿ ಮಾಡಿ ಬಿ ಎಲ್ ಓ ಗಳಿಗೆ ಸಹಕರಿಸಬೇಕು ಏನಾದರೂ ಅನಾನುಕೂಲವಿದ್ದಲ್ಲಿ ಸ್ಥಳದಲ್ಲಿಯೇ ನಮ್ಮ ಅಧಿಕಾರಿಗಳು ನಿಮ್ಮ ಸಹಾಯಕ್ಕೆ ಇರಲಿದ್ದಾರೆ, ಇದರಿಂದ ಮತದಾರರು ಯಾವುದೇ ತಪ್ಪು ಕಲ್ಪನೆಯನ್ನು ಇಟ್ಟುಕೊಳ್ಳಬಾರದು ಮತ್ತು  ಯಾವುದೇ ಕಾರಣಕ್ಕೂ ಎಸ್ ಐ ಆರ್ ನಿಂದ ದೂರ ಇರಬೇಡಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಹೆಚ್.ಡಿ. ರಾಜೇಶ್, ತಹಸೀಲ್ದಾರ್ ರೇಖಾ, ಎಸ್‌ಐಆರ್ ಮೇಲುಸ್ತುವಾರಿ ಮಂಜುನಾಥ ತಳವಾರ ಹಾಗೂ ಬಿಎಲ್‌ಒ ಸುಪ್ರೀತ, ಗೋವರ್ಧನ್, ನಟರಾಜ್ ಗೌಡ, ನಾಗರಾಜ್, ಅರುಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ