Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಗದ್ದಲದ ನಡುವೆಯೇ ಮೂರು ವಿಧೇಯಕಗಳ ಅಂಗೀಕಾರ!

ಬೆಂಗಳೂರು: ಮುಡಾ ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ಒಟ್ಟು 9 ವಿಧೇಯಕಗಳನ್ನು ಮಂಡಿಸಲಾಗಿದ್ದು, ಈ ಪೈಕಿ 8,573 ಕೋಟಿ ರೂ.ಗಳ ಪೂರಕ ಅಂದಾಜುಗಳ ಧನ ವಿನಿಯೋಗ ವಿಧೇಯಕ ಸೇರಿ ಮೂರು ವಿಧೇಯಕಗಳಿಗೆ ಅಂಗೀಕಾರ ಪಡೆಯಲಾಗಿದೆ.

ಒಟ್ಟು 9 ವಿಧೇಯಕ ಮಂಡಿಸಿದ್ದು, ಈ ಪೈಕಿ 3 ಪರ್ಯಾಲೋಚನೆಗೆ ಪರಿಗಣಿಸಲಾಯಿತು. ಮುಡಾ ಗದ್ದಲದ ನಡುವೆ ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಹಾಗೂ ಕಾಲುವೆಗಳ ಕೊನೇ ಭಾಗದ ರೈತರಿಗೂ ನೀರು ತಲುಪಿಸಲು ಅನುವಾಗುವಂತೆ ರೂಪಿಸಿರುವ ಕರ್ನಾಟಕ ನೀರಾವರಿ ತಿದ್ದುಪಡಿ ವಿಧೇಯಕ-2024 ಹಾಗೂ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ -20245ಕ್ಕೂ ಅನುಮೋದನೆ ನೀಡಲಾಯಿತು.

ಪೂರಕ ಅಂದಾಜಿನಲ್ಲಿ, ರಾಜ್ಯದ ವಿವಿಧ ಮಠಗಳು ಹಾಗೂ ದೇವಾಲಯಗಳಿಗೆ ನೀಡಲು 85 ಕೋಟಿ ರೂ.ಗಳಷ್ಟು ಮುಖ್ಯಮಂತ್ರಿಗಳ ವಿಶೇಷ ಅನುದಾನ ಒದಗಿಸುವುದು ಸೇರಿ ಕಂದಾಯ ಇಲಾಖೆಗೆ 6,993 ಕೋಟಿ ರೂ.ಗಳ ಬೇಡಿಕೆಗೆ ಸದನದ ಒಪ್ಪಿಗೆ ಪಡೆಯಲಾಯಿತು.

ನಗರಾಭಿವೃದ್ಧಿ ಇಲಾಖೆಯ 200 ಕೋಟಿ ರೂ., ಲೋಕೋಪಯೋಗಿ ಇಲಾಖೆಯ 250 ಕೋಟಿ ರೂ., ಕಾನೂನು ಇಲಾಖೆಯ 161 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ 450 ಕೋಟಿ ರೂ. ಸೇರಿ ಒಟ್ಟು 28 ಇಲಾಖೆಗಳಿಗೆ ಸಂಬಂಧಿಸಿದ ಬೇಡಿಕೆಗಳ ಮೇಲಿನ ಪೂರಕ ಅಂದಾಜುಗಳಿಗೂ ಅಂಗೀಕಾರ ಸಿಕ್ಕಿದೆ.

ಇದಲ್ಲದೆ, ಸರ್ಕಾರಿ ಇಲಾಖೆಗಳು, ನಿಗಮ-ಮಂಡಳಿ, ವಿಶ್ವವಿದ್ಯಾಲಯ ಮುಂತಾದವುಗಳಲ್ಲಿ ಗುತ್ತಿಗೆ ಆಧಾರದ ಮೇಲಿನ ನೇಮಕಾತಿ ಪ್ರಕ್ರಿಯೆಯಲ್ಲಿ ಎಸ್ಸಿ-ಎಸ್ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂದಾತವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕ- 2024, ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ ತಿದ್ದುಪಡಿ ವಿಧೇಯಕ-2024, ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ, ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಧೇಯಕಗಳನ್ನೂ ಮಂಡಿಸಲಾಯಿತು.

ಜೊತೆಗೆ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ರಕ್ಷಣೆ ಒದಗಿಸುವ ಹಾಗೂ ಹಲ್ಲೆ, ನಿಂದನೆ ಮಾಡುವವರಿಗೆ ಜಾಮೀನು ರಹಿತ ಪ್ರಕರಣ ದಾಖಲಿಸಲು ಅವಕಾಶ ನೀಡುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕ- 2024 ವಿಧೇಯಕವನ್ನು ಮಂಡನೆ ಮಾಡಲಾಯಿತು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*