Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾತಕಿ ಜಯೇಶ್ ಪೂಜಾರಿ ಬೆಳಗಾವಿ ನ್ಯಾಯಾಲಯದಲ್ಲೇ ಪಾಕ್​ಪರ ಘೋಷಣೆ

ಬೆಳಗಾವಿ, ಜೂನ್​​ 12: ಕೇಂದ್ರ ಸಚಿವ ನಿತಿನ್​ ಗಡ್ಕರಿ ಮತ್ತು ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಪಾತಕಿ ಜಯೇಶ್ ಪೂಜಾರಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗುತ್ತಿದ್ದಂತೆ ವಕೀಲರು ಮತ್ತು ಸಾರ್ವಜನಿಕರು ಆತನಿಗೆ ಧರ್ಮದೇಟು ನೀಡಿದರು. ಧರ್ಮದೇಟು ಬೀಳುತ್ತಿದ್ದಂತೆ ಪಾತಕಿ ಜಯೇಶ್ ಪೂಜಾರಿಯನ್ನು ರಕ್ಷಣೆ ಮಾಡಿ ಪೊಲೀಸರು ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋದರು.

ಆರೋಪಿ ಜಯೇಶ್ ಪೂಜಾರಿ ಈ ಹಿಂದೆ ರಾಜ್ಯ ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಧಿಕಾರಿ ಅಲೋಕ್ ಕುಮಾರ್​ಗೆ ಜೀವ ಬೆದರಿಕೆ ಹಾಗಿದ್ದನು. ಹಿಂಡಲಗಾ ಜೈಲಿನಲ್ಲಿದ್ದುಕೊಂಡು ಜೀವ ಬೆದರಿಕೆ ಹಾಕಿದ್ದನು.

ಐಪಿಎಸ್​ ಅಧಿಕಾರಿ ಅಲೋಕ್​ ಕುಮಾರ್​ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ಜಯೇಶ್ ಪೂಜಾರಿಯನ್ನು ಪೊಲೀಸರು ಇಂದು (ಜೂ.12) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯದಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಅಂತ ಆರೋಪಿ ಜಯೇಶ್​ ಪೂಜಾರಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎಂದು ತಿದುಬಂದಿದೆ.

ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್ ಕಳೆದ ವರ್ಷ ಜನವರಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಮಾಡಿದ್ದನು. ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಬೆದರಿಕೆ ಕರೆ ಮಾಡಿದ್ದನು. 10 ಕೋಟಿ ನೀಡದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. ಪ್ರಕರಣವನ್ನು ದಾಖಲಿಸಿಕೊಂಡು ಮಹಾರಾಷ್ಟ್ರ ಪೊಲೀಸರು ಕರಣದ ತನಿಖೆ ನಡೆಸಿದ್ದರು.

ತನಿಖೆ ವೇಳೆ ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್​​ ಜನವರಿ 14 ಮತ್ತು ಮಾರ್ಚ್ 21 ರಂದು ಹಿಂಡಲಗಾ ಜೈಲಿನಿಂದ ಸೆಲ್ ಫೋನ್ ಬಳಸಿ ಗಡ್ಕರಿ ಅವರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದನು ಎಂದು ಪತ್ತೆಯಾಗಿತ್ತು. ಅಲ್ಲದೆ ಈತನಿಗೆ ಭಯೋತ್ಪಾದಕ ಅಫ್ಸರ್ ಪಾಷಾ ನಂಟಿರುವುದು ಪತ್ತೆಯಾಗಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ