LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪಾತಕಿ ಜಯೇಶ್ ಪೂಜಾರಿ ಬೆಳಗಾವಿ ನ್ಯಾಯಾಲಯದಲ್ಲೇ ಪಾಕ್​ಪರ ಘೋಷಣೆ

ಬೆಳಗಾವಿ, ಜೂನ್​​ 12: ಕೇಂದ್ರ ಸಚಿವ ನಿತಿನ್​ ಗಡ್ಕರಿ ಮತ್ತು ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಪಾತಕಿ ಜಯೇಶ್ ಪೂಜಾರಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗುತ್ತಿದ್ದಂತೆ ವಕೀಲರು ಮತ್ತು ಸಾರ್ವಜನಿಕರು ಆತನಿಗೆ ಧರ್ಮದೇಟು ನೀಡಿದರು. ಧರ್ಮದೇಟು ಬೀಳುತ್ತಿದ್ದಂತೆ ಪಾತಕಿ ಜಯೇಶ್ ಪೂಜಾರಿಯನ್ನು ರಕ್ಷಣೆ ಮಾಡಿ ಪೊಲೀಸರು ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋದರು.

ಆರೋಪಿ ಜಯೇಶ್ ಪೂಜಾರಿ ಈ ಹಿಂದೆ ರಾಜ್ಯ ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಧಿಕಾರಿ ಅಲೋಕ್ ಕುಮಾರ್​ಗೆ ಜೀವ ಬೆದರಿಕೆ ಹಾಗಿದ್ದನು. ಹಿಂಡಲಗಾ ಜೈಲಿನಲ್ಲಿದ್ದುಕೊಂಡು ಜೀವ ಬೆದರಿಕೆ ಹಾಕಿದ್ದನು.

ಐಪಿಎಸ್​ ಅಧಿಕಾರಿ ಅಲೋಕ್​ ಕುಮಾರ್​ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ಜಯೇಶ್ ಪೂಜಾರಿಯನ್ನು ಪೊಲೀಸರು ಇಂದು (ಜೂ.12) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯದಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಅಂತ ಆರೋಪಿ ಜಯೇಶ್​ ಪೂಜಾರಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎಂದು ತಿದುಬಂದಿದೆ.

ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್ ಕಳೆದ ವರ್ಷ ಜನವರಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಮಾಡಿದ್ದನು. ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಬೆದರಿಕೆ ಕರೆ ಮಾಡಿದ್ದನು. 10 ಕೋಟಿ ನೀಡದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. ಪ್ರಕರಣವನ್ನು ದಾಖಲಿಸಿಕೊಂಡು ಮಹಾರಾಷ್ಟ್ರ ಪೊಲೀಸರು ಕರಣದ ತನಿಖೆ ನಡೆಸಿದ್ದರು.

ತನಿಖೆ ವೇಳೆ ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್​​ ಜನವರಿ 14 ಮತ್ತು ಮಾರ್ಚ್ 21 ರಂದು ಹಿಂಡಲಗಾ ಜೈಲಿನಿಂದ ಸೆಲ್ ಫೋನ್ ಬಳಸಿ ಗಡ್ಕರಿ ಅವರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದನು ಎಂದು ಪತ್ತೆಯಾಗಿತ್ತು. ಅಲ್ಲದೆ ಈತನಿಗೆ ಭಯೋತ್ಪಾದಕ ಅಫ್ಸರ್ ಪಾಷಾ ನಂಟಿರುವುದು ಪತ್ತೆಯಾಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್