LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನನ್ನ ರಾಜಕೀಯ ಅಂತ್ಯ ತಿರ್ಮಾನ ಮಾಡುವುದು ಜನರು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಚನ್ನಪಟ್ಟಣ ಕ್ಷೇತ್ರದಿಂದ ಡಿ‌.ಕೆ. ಶಿವಕುಮಾರ್ ಸ್ಪರ್ಧೆ ಮಾಡಿದರೆ ರಾಜಕೀಯ ಅಂತ್ಯ" ಎನ್ನುವ ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ "ನನ್ನ ರಾಜಕೀಯ ಅಂತ್ಯ ತಿರ್ಮಾನ ಮಾಡುವುದು ಜನರು. ಅವರು ನೋಡಿಕೊಳ್ಳುತ್ತಾರೆ" ಎಂದು ತಿರುಗೇಟು ನೀಡಿದ್ದಾರೆ.

10ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ನಿಮಿತ್ತ ಇಂದು ವಿಧಾನಸೌಧದ ಮುಂಭಾಗದಲ್ಲಿ ನಡೆದ ಯೋಗೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ದೊಡ್ಡವರಿಗೆಲ್ಲ ನಾನು ಮಾತನಾಡಲು ಹೋಗಲ್ಲ, ನನಗೆ ಸಮಯವಿಲ್ಲ. ನನಗೆ ಶಕ್ತಿ ಕೊಡಿ ಅಂತ ನಾನು ಮತದಾರರಿಗೆ ಕೇಳಿಕೊಂಡಿದ್ದೇನೆ. ನನ್ನ ಹಿಂದೆ‌ ಒಂದು ಶಕ್ತಿ‌ ಇದೆ. ಜನ ಇದ್ದಾರೆ. ಅವರು ನೋಡಿಕೊಳ್ಳುತ್ತಾರೆ. ನನ್ನ ಅಂತ್ಯ ಬರೆಯುವವರು ಜನರು. ವಿಶ್ವಾಸ ಇದ್ದರೆ ಮತ ಹಾಕುತ್ತಾರೆ" ಎಂದು ಹೇಳಿದರು.


ಮುಂದುವರೆದು, ಕನಕಪುರದಲ್ಲಿ ಉಪ ಚುನಾವಣೆ ಬಂದರೆ ದೇಶದ ಸಂಪತ್ತು ಹಾಳಾಗುತ್ತದೆ ಎನ್ನುವ ಶಾಸಕ ಸುರೇಶ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ "ನಾನು ಕನಕಪುರದ ಎಂಎಲ್​ಎ, ಪಕ್ಷದ ಅಧ್ಯಕ್ಷ ಸಹ 'ನನಗೂ‌ ಜವಾಬ್ದಾರಿ ಇದೆ'. ಎಲ್ಲಾ ನನ್ನದೇ ಕ್ಷೇತ್ರ, ನನ್ನದೇ ನಾಯಕತ್ವ. ನಾನು, ಸಿಎಂ ಸಿದ್ದರಾಮಯ್ಯ ಜೊತೆಗೂಡಿ‌ ಎಲೆಕ್ಷನ್‌ ಮಾಡುತ್ತೇವೆ" ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್