LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮತಗಟ್ಟೆಗಳಲ್ಲಿ ಬ್ರೆತ್ ಅನಲೈಸರ್ ಪರೀಕ್ಷೆ ಕೋರಿಕೆ ಅರ್ಜಿ: ಸುಪ್ರೀಂಕೋರ್ಟ್ ಅರ್ಜಿ ವಜಾ





ನವದೆಹಲಿ,ಏಪ್ರಿಲ್ 10: : ಲೋಕಸಭೆ ಚುನಾವಣೆ ಮತದಾನದ ವೇಳೆ ಮತಗಟ್ಟೆಯ ಸರತಿ ಸಾಲಿನಲ್ಲಿ ಬ್ರೆತ್ ಅನಲೈಸರ್ ಪರೀಕ್ಷೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾ ಮಾಡಿದೆ.

ನ್ಯಾಯಮೂರ್ತಿ ಸಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯಪೀಠವು, ಅರ್ಜಿ ವಜಾಗೊಳಿಸಿ, ಆಂಧ್ರಪ್ರದೇಶದ ಹೈಕೋರ್ಟ್ ನೀಡಿದ್ದ ಆದೇಶದ ವಿಷಯದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಅಲ್ಲದೆ, ಪ್ರಚಾರದ ಹಿತಾಸಕ್ತಿಯಿಂದ ಸಲ್ಲಿಸಲಾಗಿರುವ ಅರ್ಜಿ ಇದಾಗಿದೆ ಎಂದು ಹೇಳಿದೆ.

ಏನಿದು? ಪ್ರಚಾರಕ್ಕಾಗಿ ಸಲ್ಲಿಸಿರುವ ಅರ್ಜಿಯೇ? ಚುನಾವಣೆ ದಿನ ಮದ್ಯ ಮಾರಾಟ ಇರುವುದಿಲ್ಲ. ಎಲ್ಲಾ ಕಡೆ ಪೊಲೀಸರ ನಿಯೋಜನೆ ಇರುತ್ತದೆ. ಇಂತಹ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸುವುದಿಲ್ಲ ಎಂದು ಪೀಠ ಹೇಳಿದೆ.

ಈ ಸಂಬಂಧ ಜನವಾದಿ ಪಕ್ಷದ ಆಂಧ್ರಪ್ರದೇಶದ ಘಟಕವು ಹೈಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ಅರ್ಜಿ ವಜಾಗೊಳಿಸಿದ ಬಳಿಕ ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗಿತ್ತು.















ಯಾವುದೇ ವ್ಯಕ್ತಿ ಮದ್ಯದಿಂದ ಉತ್ತೇಜನಗೊಂಡು ಮತ ಹಾಕುವುದನ್ನು ತಡೆಯಲು ಮತಗಟ್ಟೆಗಳ ಪ್ರವೇಶ ದ್ವಾರದಲ್ಲಿ ಬ್ರೆತ್ ಅನಾಲೈಸರ್ ಪರೀಕ್ಷೆ ನಡೆಸಲು ಚುನಾವಣಾ ಆಯೋಗಕ್ಕೆ ಸೂಚಿಸಬೇಕೆಂದು ಅರ್ಜಿದಾರರು ಕೋರಿದ್ದರು.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್