LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕಳ್ಳನತ ಬಳಿಯೇ ಕಳ್ಳತನ; ಚಿನ್ನದ ಪದಕ ಗೆದ್ದ ಪಿಐ ವಿರುದ್ಧ ಚಿನ್ನ ಕದ್ದ ಆರೋಪ

ಮಂಗಳೂರು, (ಏಪ್ರಿಲ್ 05): ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ಪೊಲೀಸ್‌ ಇನ್ಸ್‌ಪೆಕ್ಟರ್‌ ವಿರುದ್ಧ ಆರೋಪಿಯ ಮೈಮೇಲಿದ್ದ 50 ಗ್ರಾಮ್‌ ಚಿನ್ನ ಎಗರಿಸಿದ ಆರೋಪ ಬಂದಿದೆ. ಮಂಗಳೂರು ಮಹಿಳಾ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ನಾಯಕ್‌ ಅವರು ಪ್ರಕರಣವೊಂದನ್ನು ಮುಚ್ಚಿ ಹಾಕಲು 3 ಲಕ್ಷ ರೂಪಾಯಿ ಲಂಚದ ಜೊತೆ ಆರೋಪಿಯ ಮೈಮೇಲಿದ್ದ 50 ಗ್ರಾಮ್​ ಚಿನ್ನವನ್ನು ಗುಳಂ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಉಳ್ಳಾಲ ಕೋಟೆಕಾರ್‌ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣ ಭೇದಿಸಿದ ಪೊಲೀಸರ ತಂಡದಲ್ಲಿದ್ದ ಬಾಲಕೃಷ್ಣ ಅವರಿಗೆ ಸಿಎಂ ಚಿನ್ನದ ಪದಕ ಲಭಿಸಿದೆ. ಇದೇ ಸಂದರ್ಭದಲ್ಲೇ ಬಾಲಕೃಷ್ಣ ಲಂಚ ಹಾಗೂ 50 ಗ್ರಾಮ್ ಚಿನ್ನ ಎಗರಿಸಿದ್ದಾರೆ ಎಂದು ಎಸಿಪಿಗೆ ದೂರು ನೀಡಿದ ವಿಚಾರ ಬಯಲಿಗೆ ಬಂದಿದೆ.

2024ರ ಜೂ. 28ರಂದು ಉಳ್ಳಾಲದಲ್ಲಿ ವೃದ್ಧರೊಬ್ಬರು ತನ್ನ ಮನೆಯಿಂದ 15 ಲಕ್ಷ ರೂ. ಬೆಲೆಯ 32 ಪವನ್ ಚಿನ್ನಾಭರಣ ಕಳವಾದ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೊಂಡಿದ್ದ ಇನ್ಸ್‌ಪೆಕ್ಟರ್‌ ಬಾಲಕೃಷ್ಣ ದೂರು ನೀಡಿದ ವ್ಯಕ್ತಿಯ ಮಗ ಪಿಯುಸಿ ವಿದ್ಯಾರ್ಥಿ ಸಹಿತ ಇಬ್ಬರು ಅಪ್ರಾಪ್ತರು ಮತ್ತು ಆತನ ಮೂವರು ವಯಸ್ಕ ಗೆಳೆಯರನ್ನು ಬಂಧಿಸಿದ್ದರು. ಕಳವಾದ ಚಿನ್ನಾಭರಣವನ್ನು ನಗರದ ಜುವೆಲ್ಲರಿಗಳಿಗೆ ಮಾರಾಟ ಮಾಡಿದ್ದು, ಇದನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದರು.‌

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್