Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನ 103 ಬಸ್​ ನಿಲ್ದಾಣಗಳ ಸ್ಥಳಾಂತರಕ್ಕೆ ಪ್ಲಾನ್

ಬೆಂಗಳೂರು,ಅಕ್ಟೋಬರ್ 21: ಬೆಂಗಳೂರಿನ ಯಾವುದೇ ದಿಕ್ಕಿಗೆ ಹೋದರೂ ಟ್ರಾಫಿಕ್ ​​ ಕಿರಿಕಿರಿ ಸರ್ವೆಸಾಮಾನ್ಯವಾಗಿದೆ.ಇದಕ್ಕೆ ಹಲವು ಕಾರಣಗಳಿದ್ದು, ಟ್ರಾಫಿಕ್​ ಸಿಗ್ನಲ್​ಗಳ ಬಳಿ ಬಸ್​ ನಿಲ್ದಾಣಗಳಿರುವುದೂ ಪ್ರಮುಖ ಕಾರಣವಾಗಿದೆ. ಹೀಗಾಗಿ ನಗರದ ಎಲ್ಲೆಲ್ಲಿ ಅವೈಜ್ಞಾನಿಕವಾಗಿ, ಅಸಮರ್ಪಕ ಬಸ್​ ನಿಲ್ದಾಣಗಳಿವೆಯೋ ಅವುಗಳನ್ನು ಸ್ಥಳಾಂತರ ಮಾಡಲು ಟ್ರಾಫಿಕ್​ ಪೊಲೀಸರು ಹಾಗೂ ಬಿಎಂಟಿಸಿ ಜಂಟಿ ಸಮೀಕ್ಷೆ ನಡೆಸಿ ಪಟ್ಟಿ ಸಿದ್ಧ ಮಾಡಿದೆ.



ಬೆಂಗಳೂರಿನಲ್ಲಿ ಓಡಾಟ ಮಾಡುವ ವಾಹನಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ಟ್ರಾಫಿಕ್​ ದಟ್ಟಣೆ ಕೂಡ ಗಮನಾರ್ಹವಾಗಿ ಹೆಚ್ಚಾಗಿದೆ. ಹದಗೆಟ್ಟಿರುವ ರಸ್ತೆಗಳು, ರಸ್ತೆ ಗುಂಡಿಗಳು, ಅಡ್ಡಾದಿಡ್ಡಿ ಪಾರ್ಕಿಂಗ್​ ಜೊತೆಗೆ ಟ್ರಾಫಿಕ್​ ಸಿಗ್ನಲ್​ಗಳ ಬಳಿಯೇ ಬಸ್​ ನಿಲ್ದಾಣಗಳಿರುವುದೂ ಕೂಡ ಟ್ರಾಫಿಕ್​ ಜಾಮ್​​ ಹೆಚ್ಚಾಗಲು ಕಾರಣವಾಗಿದೆ. ಹೀಗಾಗಿಯೇ ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿರುವ ಬೆಂಗಳೂರು ಸಂಚಾರ ಪೊಲೀಸರು, ಬಿಎಂಟಿಸಿ ಅಧಿಕಾರಿಗಳ ಜೊತೆ ಜಂಟಿ ಸಮೀಕ್ಷೆ ನಡೆಸಿ ಸ್ಥಳಾಂತರ ಮಾಡಬೇಕಾದ 103 ಬಸ್​ ನಿಲ್ದಾಣಗಳ ಪಟ್ಟಿ ಮಾಡಿದ್ದಾರೆ.

ಸಾಮಾನ್ಯವಾಗಿ ಹೆಚ್ಚಿನ ದಟ್ಟಣೆಯ ಸಾಕ್ಷಿಯಾಗುವ ಸಿಗ್ನಲ್​ಗಳಿಗೆ ಸಮೀಪವಿರುವ 103 ಬಸ್​ ನಿಲ್ದಾಣಗಳನ್ನ ಕನಿಷ್ಠ 50 ಮೀಟರ್​​ಗಳಿಂದ 300 ಮೀಟರ್​ಗಳವರೆಗೂ ಸ್ಥಳಾಂತರ ಮಾಡುವ ಅನಿವಾರ್ಯತೆ ಇದೆ ಎಂದು ಬೆಂಗಳೂರು ಸಂಚಾರ ಪೊಲೀಸರು, ಬಿಎಂಟಿಸಿ ಸಮೀಕ್ಷೆಯಲ್ಲಿ ಮನಗಂಡಿದ್ದಾರೆ. ಹೀಗಾಗಿ ಸ್ಥಳಾಂತರ ಮಾಡಿ ಎಂದು ಗ್ರೇಟರ್​ ಬೆಂಗಳೂರು ಪ್ರಾಧಿಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ, ಎಂ.ಜಿ ರಸ್ತೆ, ಯಲಹಂಕ ಆರ್​ಎಂಜೆಡ್​​, ಈಸ್ಟ್​ ಎಂಡ್​ ಜಂಕ್ಷನ್​, ಐಟಿಪಿಎಲ್​ ಆರ್​ಎಕ್ಸ್​ಡಿಕ್ಸ್​ ಆಸ್ಪತ್ರೆ, ಹೋಫ್​ಫಾರ್ಮ್​​​​ ಜಂಕ್ಷನ್​ ಸೇರಿ 103 ಸ್ಥಳಗಳಲ್ಲಿ ಟ್ರಾಫಿಕ್​ ದಟ್ಟಣೆ ಇಳಿಸುವ ಉದ್ದೇಶವಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ