Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನ 103 ಬಸ್​ ನಿಲ್ದಾಣಗಳ ಸ್ಥಳಾಂತರಕ್ಕೆ ಪ್ಲಾನ್

ಬೆಂಗಳೂರು,ಅಕ್ಟೋಬರ್ 21: ಬೆಂಗಳೂರಿನ ಯಾವುದೇ ದಿಕ್ಕಿಗೆ ಹೋದರೂ ಟ್ರಾಫಿಕ್ ​​ ಕಿರಿಕಿರಿ ಸರ್ವೆಸಾಮಾನ್ಯವಾಗಿದೆ.ಇದಕ್ಕೆ ಹಲವು ಕಾರಣಗಳಿದ್ದು, ಟ್ರಾಫಿಕ್​ ಸಿಗ್ನಲ್​ಗಳ ಬಳಿ ಬಸ್​ ನಿಲ್ದಾಣಗಳಿರುವುದೂ ಪ್ರಮುಖ ಕಾರಣವಾಗಿದೆ. ಹೀಗಾಗಿ ನಗರದ ಎಲ್ಲೆಲ್ಲಿ ಅವೈಜ್ಞಾನಿಕವಾಗಿ, ಅಸಮರ್ಪಕ ಬಸ್​ ನಿಲ್ದಾಣಗಳಿವೆಯೋ ಅವುಗಳನ್ನು ಸ್ಥಳಾಂತರ ಮಾಡಲು ಟ್ರಾಫಿಕ್​ ಪೊಲೀಸರು ಹಾಗೂ ಬಿಎಂಟಿಸಿ ಜಂಟಿ ಸಮೀಕ್ಷೆ ನಡೆಸಿ ಪಟ್ಟಿ ಸಿದ್ಧ ಮಾಡಿದೆ.



ಬೆಂಗಳೂರಿನಲ್ಲಿ ಓಡಾಟ ಮಾಡುವ ವಾಹನಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ಟ್ರಾಫಿಕ್​ ದಟ್ಟಣೆ ಕೂಡ ಗಮನಾರ್ಹವಾಗಿ ಹೆಚ್ಚಾಗಿದೆ. ಹದಗೆಟ್ಟಿರುವ ರಸ್ತೆಗಳು, ರಸ್ತೆ ಗುಂಡಿಗಳು, ಅಡ್ಡಾದಿಡ್ಡಿ ಪಾರ್ಕಿಂಗ್​ ಜೊತೆಗೆ ಟ್ರಾಫಿಕ್​ ಸಿಗ್ನಲ್​ಗಳ ಬಳಿಯೇ ಬಸ್​ ನಿಲ್ದಾಣಗಳಿರುವುದೂ ಕೂಡ ಟ್ರಾಫಿಕ್​ ಜಾಮ್​​ ಹೆಚ್ಚಾಗಲು ಕಾರಣವಾಗಿದೆ. ಹೀಗಾಗಿಯೇ ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿರುವ ಬೆಂಗಳೂರು ಸಂಚಾರ ಪೊಲೀಸರು, ಬಿಎಂಟಿಸಿ ಅಧಿಕಾರಿಗಳ ಜೊತೆ ಜಂಟಿ ಸಮೀಕ್ಷೆ ನಡೆಸಿ ಸ್ಥಳಾಂತರ ಮಾಡಬೇಕಾದ 103 ಬಸ್​ ನಿಲ್ದಾಣಗಳ ಪಟ್ಟಿ ಮಾಡಿದ್ದಾರೆ.

ಸಾಮಾನ್ಯವಾಗಿ ಹೆಚ್ಚಿನ ದಟ್ಟಣೆಯ ಸಾಕ್ಷಿಯಾಗುವ ಸಿಗ್ನಲ್​ಗಳಿಗೆ ಸಮೀಪವಿರುವ 103 ಬಸ್​ ನಿಲ್ದಾಣಗಳನ್ನ ಕನಿಷ್ಠ 50 ಮೀಟರ್​​ಗಳಿಂದ 300 ಮೀಟರ್​ಗಳವರೆಗೂ ಸ್ಥಳಾಂತರ ಮಾಡುವ ಅನಿವಾರ್ಯತೆ ಇದೆ ಎಂದು ಬೆಂಗಳೂರು ಸಂಚಾರ ಪೊಲೀಸರು, ಬಿಎಂಟಿಸಿ ಸಮೀಕ್ಷೆಯಲ್ಲಿ ಮನಗಂಡಿದ್ದಾರೆ. ಹೀಗಾಗಿ ಸ್ಥಳಾಂತರ ಮಾಡಿ ಎಂದು ಗ್ರೇಟರ್​ ಬೆಂಗಳೂರು ಪ್ರಾಧಿಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ, ಎಂ.ಜಿ ರಸ್ತೆ, ಯಲಹಂಕ ಆರ್​ಎಂಜೆಡ್​​, ಈಸ್ಟ್​ ಎಂಡ್​ ಜಂಕ್ಷನ್​, ಐಟಿಪಿಎಲ್​ ಆರ್​ಎಕ್ಸ್​ಡಿಕ್ಸ್​ ಆಸ್ಪತ್ರೆ, ಹೋಫ್​ಫಾರ್ಮ್​​​​ ಜಂಕ್ಷನ್​ ಸೇರಿ 103 ಸ್ಥಳಗಳಲ್ಲಿ ಟ್ರಾಫಿಕ್​ ದಟ್ಟಣೆ ಇಳಿಸುವ ಉದ್ದೇಶವಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ