Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಪರಿಸರ ಸಮತೋಲನಕ್ಕೆ ಗಿಡಮರಗಳನ್ನು ಬೆಳೆಸುವುದು ಅವಶ್ಯವಿದೆ"

ಮೂಡಲಗಿ: ‘ಗಿಡಮರಗಳನ್ನು ಸಂರಕ್ಷಿಸಿ ಬೆಳೆಸುವುದು ಪರಿಸರಕ್ಕೆ ಕೊಡುವ ಬಹುದೊಡ್ಡ ಕೊಡುಗೆಯಾಗಿದೆ’ ಎಂದು ತಹಶೀಲ್ದಾರ್ ಶ್ರೀಶೈಲ್ ಗುಡಮೆ ಹೇಳಿದರು.
ಮೂಡಲಗಿಯ ನಿಸರ್ಗ ಫೌಂಡೇಶನ್, ಸತ್ಯ ಸಾಯಿ ಸೇವಾ ಸಮಿತಿ ಹಾಗೂ ಯುವ ಜೀವನ ಸೇವಾ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಈರಪ್ಪ ಢವಳೇಶ್ವರ ಇವರ ಪುತ್ರಿ ಸಾದ್ವಿ ಇವಳ ೧೦ನೇ ವ?ದ ಹುಟ್ಟು ಹಬ್ಬದ ಅಂಗವಾಗಿ ಸಾಯಿ ಮಂದಿರ ರಸ್ತೆಯ ಎರಡೂ ಬದಿಯಲ್ಲಿ ಸಸಿ ನೆಡುವ ಹಾಗೂ ಅಲಂಕಾರಿಕ ಹೂಕುಂಡಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವೃಕ್ಷ ಪ್ರೇಮಿ ಈರಪ್ಪ ಢವಳೇಶ್ವರ ಕಳೆದ ೧೨ ವ?ಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಸಾವಿರಾರು ಸಸಿಗಳನ್ನು ನೆಟ್ಟು ಬೆಳಿಸಿರುವುದು ಶ್ಲಾಘನೀಯ ಕಾರ್ಯಕವಾಗಿದೆ ಎಂದರು.
ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಸೋನವಾಲಕರ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ಹಿರೇಮಠ ಅವರು ಮಾತನಾಡಿ ಪರಿಸರ ಸಮತೋಲನಕ್ಕೆ ಗಿಡಮರಗಳನ್ನು ಬೆಳೆಸುವುದು ಅವಶ್ಯವಿದೆ. ಈರಪ್ಪ ಢವಳೇಶ್ವರ ಅವರ ಸಸಿ ನೆಡುವ ಕಾರ್ಯವು ಇತರ ಯುವಕರಿಗೆ ಪ್ರೇರಣೆಯಾಗಿದೆ ಎಂದರು.
ತಹಶೀಲ್ದಾರ್ ಶ್ರೀಶೈಲ್ ಗುಡಮೆ, ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ, ಸಿಡಿಪಿಒ ಯಲ್ಲಪ್ಪ ಗದಾಡಿ, ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಸೋನವಾಲಕರ, ಅರಣ್ಯ ಇಲಾಖೆಯ ಕವನ ನಂದಿ ಹಾಗೂ ಈರಪ್ಪ ಢವಳೇಶ್ವರ ಅವರನ್ನು ಸಾಯಿ ಮಂದಿರದ ಪರವಾಗಿ ಸನ್ಮಾನಿಸಿದರು. ಸತ್ಯ ಸಾಯಿ ಸೇವಾ ಸಮಿತಿಯ ಕೆ.ಬಿ. ನಾವಳ್ಳಿ ಅಧ್ಯಕ್ಷತೆವಹಿಸಿದ್ದರು.
ಅತಿಥಿಗಳಾಗಿ ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ, ಸಿಡಿಪಿಒ ಯಲ್ಲಪ್ಪ ಗದಾಡಿ, ಅರಣ್ಯ ಇಲಾಖೆಯ ಕವನ ನಂದಿ, ಆರ್ಚಕ ಸಂಗಮೇಶ ಹಿರೇಮಠ, ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ಬಿಆರ್‌ಸಿ ರೇಣುಕಾ ಆನಿ, ಬಸವಪ್ರಭು ನಿಡಗುಂದಿ, ಎಸ್.ಆರ್. ಸೋನವಾಲಕರ, ನಿವೃತ್ತ ಪ್ರಾಚಾರ್ಯ ಎಸ್.ಡಿ. ತಳವಾರ, ಪ್ರಕಾಶ ಮಾದರ, ಕಸಾಪ ಅಧ್ಯಕ್ಷ ಸಂಜಯ ಶಿಂಧಿಹಟ್ಟಿ, ಕಲ್ಮೇಶ ಗೋಕಾಕ, ಚಂದ್ರಶೇಖರ ಪತ್ತಾರ, ಭಗೀರಥ ಉಪ್ಪಾರ ಅಭಿವೃದ್ಧಿ ಸೇವಾ ಸಂಘದ ಅಧ್ಯಕ್ಷ ಈಶ್ವರ ಕಂಕಣವಾಡಿ, ಶಂಕರ ಚಿಪ್ಪಲಕಟ್ಟಿ, ಬಸವರಾಜ ಮುಧೋಳ, ಸಾಲೀನಿ ಪೂಜೇರಿ, ರವಿ ನಂದಗಾಂವ ಇದ್ದರು. ಬಾಲಶೇಖರ ಬಂದಿ ಪ್ರಾಸ್ತಾವಿಕ ಮಾತನಾಡಿದರು, ಮಲ್ಲು ಬೋಳನ್ನವರ ಸ್ವಾಗತಿಸಿದರು, ಈರಪ್ಪ ಢವಳೇಶ್ವರ ವಂದಿಸಿದರು.

 

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ