Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಎಂ ಕಿಸಾನ್ ಹಣ ಶೇ. 30ರಷ್ಟು ಹೆಚ್ಚಿಸುವ ಸಾಧ್ಯತೆ

ನವದೆಹಲಿ, ಜುಲೈ 16: ಮುಂದಿನ ವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್​ನಲ್ಲಿ ಇರುವ ನಿರೀಕ್ಷೆಗಳಲ್ಲಿ ಪಿಎಂ ಕಿಸಾನ್ ಯೋಜನೆ ಹಣ ಹೆಚ್ಚಳವೂ ಇದೆ. ವರದಿಗಳ ಪ್ರಕಾರ ಪಿಎಂ ಕಿಸಾನ್ ಯೋಜನೆಗೆ ಬಜೆಟ್​ನಲ್ಲಿ ನೀಡಲಾಗುವ ಹಣದಲ್ಲಿ ಶೇ. 30ರಷ್ಟು ಹೆಚ್ಚಳ ಆಗಬಹುದು ಎನ್ನಲಾಗುತ್ತಿದೆ. ಮಧ್ಯಂತ ಬಜೆಟ್​ನಲ್ಲಿ ಈ ಯೋಜನೆಗೆ ಒಂದು ವರ್ಷಕ್ಕೆ 60,000 ಕೋಟಿ ರೂ ಎತ್ತಿ ಇಡಲಾಗಿತ್ತು. ಜುಲೈ 17ರ ಬಜೆಟ್​ನಲ್ಲಿ ಈ ಹಂಚಿಕೆಯನ್ನು 80,000 ಕೋಟಿ ರೂಗೆ ಹೆಚ್ಚಿಸಬಹುದು ಎನ್ನಲಾಗುತ್ತಿದೆ.

ಮೂಲಗಳ ಪ್ರಕಾರ ಈ ಬಾರಿಯ ಬಜೆಟ್​ನಲ್ಲಿ ಯುವಜನರು, ಮಹಿಳೆಯರು, ರೈತರು ಮತ್ತು ಗ್ರಾಮೀಣಭಾಗ ಈ ನಾಲ್ಕು ಅಂಶಗಳಿಗೆ ಹೆಚ್ಚಿನ ಒತ್ತು ಕೊಡಬಹುದು. ಹೀಗಾಗಿ, ಪಿಎಂ ಕಿಸಾನ್ ಯೋಜನೆಗೆ ಹಣ ಹಂಚಿಕೆ ಹೆಚ್ಚಿಸುವ ಸಾಧ್ಯತೆ ಗಟ್ಟಿಯಾಗಿದೆ. ರೈತ ಸಂಘಟನೆಗಳ ಪ್ರತಿನಿಧಿಗಳು ಈಗಾಗಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಪಿಎಂ ಕಿಸಾನ್ ಯೋಜನೆ ಹಾಗು ಇತರ ಯೋಜನೆಗಳಿಗೆ ಹೆಚ್ಚಿನ ಹಣ ಹಂಚಿಕೆ ಮಾಡಿ ರೈತರಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ.

ಸದ್ಯ, ಪಿಎಂ ಕಿಸಾನ್ ಯೋಜನೆಯಲ್ಲಿ ಒಂದು ವರ್ಷದಲ್ಲಿ 6,000 ರೂ ಹಣವನ್ನು ರೈತರಿಗೆ ನೀಡಲಾಗುತ್ತಿದೆ. ಅಂದರೆ, ತಲಾ 2,000 ರೂಗಳಂತೆ ಮೂರು ಕಂತುಗಳಲ್ಲಿ ಈ ಹಣವನ್ನು ನೀಡಲಾಗುತ್ತಿದೆ. ಈಗ ಒಂದು ಕಂತು ಹೆಚ್ಚು ಮಾಡಬಹುದು. 2,000 ರೂಗಳ ನಾಲ್ಕು ಕಂತುಗಳನ್ನು ರೈತರ ಖಾತೆಗಳಿಗೆ ಹಾಕಬಹುದು. ಒಟ್ಟು ಒಂದು ವರ್ಷದಲ್ಲಿ 8,000 ರೂ ಹಣವು ರೈತರಿಗೆ ಸಿಗಲಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*