Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಅಪರಾಧಗಳ ನಿಯಂತ್ರಣಕ್ಕೆ ಮನೆಮನೆಗೆ ಪೊಲೀಸ್ ವ್ಯವಸ್ಥೆ ಸಹಕಾರಿ"

ಬೆಳಗಾವಿ : ಮನೆಮನೆಗೆ ಪೊಲೀಸ್ ವ್ಯವಸ್ಥೆಯ ಹಿಂದಿನ ವ್ಯವಸ್ಥೆಯಾಗಿದೆ. ಪ್ರಸ್ತುತ ನಡೆಯುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಇದು ಸಹಕಾರಿಯಾಗಲಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ತಿಳಿಸಿದರು.

ಬುಧವಾರ ನಗರದ ವಾರ್ತಾ ಭವನದಲ್ಲಿ ಬೆಳಗಾವಿ ಪತ್ರಕರ್ತರ ಸಂಘದ ವತಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನೆಮನೆಗೆ ಪೊಲೀಸ್ ವ್ಯವಸ್ಥೆಯು ಪೊಲೀಸ್ ಇಲಾಖೆಯ ಕುರಿತು ಜನರ ಮನಸ್ಸಿನಲ್ಲಿರುವ ಭಯವನ್ನು ಹೋಗಲಾಡಿಸಿ, ಭರವಸೆ ಹಾಗೂ ಉತ್ತಮ ಭಾಂದವ್ಯಕ್ಕೆ ಕಾರಣವಾಗುತ್ತದೆ. ಮಹಿಳೆಯರು, ಮಕ್ಕಳು ಹಾಗೂ ಮನೆಯಲ್ಲಿರುವ ಎಲ್ಲರಿಗೂ ಕಾನೂನಿನ ಅರಿವು ಮೂಡಲಿದೆ. ಇದು ಅಪರಾಧಗಳ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ ಎಂದರು.

*ನನ್ನ ಬೆಳಗಾವಿ ನನ್ನ ಸಲಹೆ*
ಬೆಳಗಾವಿಗರ ಸಮಸ್ಯೆಯನ್ನು ವ್ಯಕ್ತಪಡಿಸಲು ನಗರ ಪೊಲೀಸ್ ಆಯುಕ್ತಾಲಯದ ವತಿಯಿಂದ ನನ್ನ ಬೆಳಗಾವಿ ನನ್ನ ಸಲಹೆ ಎಂಬ ವೆಬ್ಸೈಟ್ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ತಮ್ಮ ಸುತ್ತಮುತ್ತಲು ನಡೆಯುವ ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಕೃತ್ಯಗಳು ಹಾಗೂ ಸಮಸ್ಯೆಗಳ ಕುರಿತು ಇಲ್ಲಿ ಹಂಚಿಕೊಳ್ಳಬಹುದು. ಇದರಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಸಾರ್ವಜನಿಕರು ಯಾವುದೇ ಭಯವಿಲ್ಲದೇ ತಮ್ಮ ಸಲಹೆಗಳನ್ನು ವೆಬ್ಸೈಟ್ ನಲ್ಲಿ ತಿಳಿಸಬಹುದು ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಮಾಹಿತಿ ನೀಡಿದರು.
ದಂಡ ಭರಿಸಲು ಬೆಳಗಾವಿ ಒನ್ ಬಳಸಿ : ವೇಗವಾಗಿ ಬೆಳೆಯುತ್ತಿರುವ ಬೆಳಗಾವಿ ನಗರದಲ್ಲಿ ಟ್ರಾಫಿಕ್ ನಿಯಮಾವಳಿಗಳ ಉಲ್ಲಂಘನೆಯ ಪ್ರಕರಣಗಳು ಹೆಚ್ಚಿವೆ. ಪ್ರಸ್ತುತ ವಾಹನಗಳನ್ನು ತಡೆದು ತಪಾಸಣೆ ನಡೆಸದಂತೆ ಸಿಬ್ಬಂದಿಗೆ ತಿಳಿಸಿದ್ದೇವೆ. ಅಲ್ಲದೇ ಆನ್ಲೈನ್ ಮೂಲಕವೇ ಸಂಚಾರಿ ನಿಯಮಾವಳಿಗಳ ಉಲ್ಲಂಘನೆಗೆ ದಂಡ ವಿಧಿಸಲಾಗುತ್ತಿದೆ. ಈ ದಂಡವನ್ನು ಬೆಳಗಾವಿ ಒನ್ ನಲ್ಲಿಯೇ ಕಟ್ಟುವ ಯೋಜನೆಗೆ ಸಿದ್ಧತೆ ನಡೆಸಿದ್ದೇವೆ. ಟ್ರಕ್ ಅಸೋಸಿಯೇಷನ್ ಪದಾಧಿಕಾರಿಗಳು, ಕೆಎಸ್‌ಆರ್ಟಿಸಿ ಸಿಬ್ಬಂದಿಯೊಂದಿಗೆ ಚರ್ಚಿಸಲಾಗಿದ್ದು, ಟ್ರಾಫಿಕ್ ಸಮಸ್ಯೆಯುಂಟು ಮಾಡುವ ಸ್ಥಳಗಳನ್ನು ಗುರುತಿಸಲಾಗಿದ್ದು, ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ ಎಂದು ಭೂಷಣ ಬೂರಸೆ ತಿಳಿಸಿದರು.

ಯುವತಿಯರು, ವಿದ್ಯಾರ್ಥಿನಿಯರ ಹಾಗೂ ಮಹಿಳೆಯರ ಸುರಕ್ಷತೆಗೆ ಪೊಲೀಸ್ ಇಲಾಖೆಯ ಚನ್ನಮ್ಮ ಪಡೆಯನ್ನು ಮತ್ತಷ್ಟು ಸಕ್ರಿಯಗೊಳ್ಳಲಿದೆ.

ಈ ವೇಳೆ ಪತ್ರಕರ್ತರ ಸಂಘದ ಅಧ್ಯಕ್ಷ ವಿಲಾಸ ಜೋಶಿ, ಹಿರಿಯ ಪತ್ರಕರ್ತರಾದ ರವಿ ಉಪ್ಪಾರ,
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ