LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಶಾಂತಿ-ಸುವ್ಯವಸ್ಥೆ ಕಾಪಾಡಲು ಪೊಲೀಸರ ಕಟ್ಟುನಿಟ್ಟಿನ ಸಂದೇಶ

ಗಣೇಶೋತ್ಸವದ ಹಿನ್ನೆಲೆಯಲ್ಲಿ ಮಹಾಲಿಂಗಪುರದಲ್ಲಿ ಪೊಲೀಸ್ ಪಥಸಂಚಲನ


ಮಹಾಲಿಂಗಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಮಹಾಲಿಂಗಪುರ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರೀತಮ್ ನಾಯಕ್ ಅವರ ನೇತೃತ್ವದಲ್ಲಿ ಬುಧವಾರ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಹಾಗೂ ಹೋಂ ಗಾರ್ಡ್ ಸಿಬ್ಬಂದಿಯಿಂದ ಪಥಸಂಚಲನ ನಡೆಯಿತು.
ನಗರದ ಪ್ರಮುಖ ರಸ್ತೆ, ವೃತ್ತಗಳು ಹಾಗೂ ಗಣೇಶ ಮೂರ್ತಿಗಳ ಪ್ರತಿ?ಪನಾ ಸ್ಥಳಗಳ ಸುತ್ತಮುತ್ತ ಪೊಲೀಸ್ ಸಿಬ್ಬಂದಿ ಪಥಸಂಚಲನ ನಡೆಸಿ ಸಾರ್ವಜನಿಕರಲ್ಲಿ ಸುರಕ್ಷತೆಯ ಭರವಸೆ ಮೂಡಿಸಿದರು. ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸುವಂತೆ ಸಾರ್ವಜನಿಕರಿಗೆ ಸಂದೇಶ ನೀಡಲಾಯಿತು.
ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದರು.
ಗಣೇಶೋತ್ಸವದ ದಿನಗಳಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿ, ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಯಿತು.
ಪಥಸಂಚಲನದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಹೋಂ ಗಾರ್ಡ್ ಸಿಬ್ಬಂದಿ ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್