Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಬೆಂಗಳೂರು ಕರಗ ಮಹೋತ್ಸವ: ಭದ್ರತೆಗೆ ಪೋಲಿಸರು , ಸಿಸಿಟಿವಿ ಅಳವಡಿಕೆ‌

ಬೆಂಗಳೂರು, ಏಪ್ರಿಲ್ 22ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೆ  ಕ್ಷಣಗಣನೆ ಆರಂಭವಾಗಿದ್ದು, ಕರಗ ಮಹೋತ್ಸವ ಮಂಗಳವಾರ ನಡೆಯಲಿದೆ.‌ ಹೀಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕರಗ ಎಲ್ಲಿಲ್ಲಿ ಬರಲಿದೆ ಎನ್ನುವುದ ಸಂಪೂರ್ಣ ವಿವರ ಸಿದ್ಧವಾಗಿದೆ.

ಮಧ್ಯರಾತ್ರಿ 2 ಗಂಟೆಯಿಂದ ಬೆಳ್ಳಗ್ಗೆ 10 ಗಂಟೆಯವರೆಗೂ ಕರಗ ಮಹೋತ್ಸವ ನಡೆಯಲಿದೆ. ಅದ್ದೂರಿಯಾಗಿ ಕರಗವನ್ನು ಬರಮಾಡಿಕೊಳ್ಳಲು ಕರಗ ಸಮಿತಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಳೆ ಬೆಳಗ್ಗೆಯಿಂದ ಕರಗದ ಶಾಸ್ತ್ರಗಳು ಆರಂಭವಾಗಿ ಮಧ್ಯರಾತ್ರಿವರೆಗೂ ನಡೆಯಲಿದ್ದು, ಶಾಸ್ತ್ರಗಳು ಮುಗಿದ ನಂತರ ಮಧ್ಯರಾತ್ರಿ 2 ಗಂಟೆಗೆ ಅಧಿಕೃತವಾಗಿ ಕರಗ ಶಾಕೋತ್ಸವ ಆರಂಭವಾಗಲಿದೆ.

ಸದ್ಯ ಹಸಿ ಕರಗ ನಡೆದ ನಂತರ ತಾಯಿ ದ್ರೌಪದಿ ತಾಯಿ ನೆಲೆಸಿದ್ದಾಳೆ ಎಂದೇ ಪರಿಗಣನೆ ಮಾಡಲಾಗುತ್ತದೆ. ಹೀಗಾಗಿ ನಾಳೆ‌ ತಾಯಿಗೆ ವಿಶೇಷ ಶಾಸ್ತ್ರಗಳನ್ನು ಮಾಡಲಾಗುತ್ತದೆ. ‌ಅದರಲ್ಲಿ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರಗಳು ನೆರೆವೇರಲಿವೆ. ನಾಳೆ‌ ರಾತ್ರಿ 2 ಗಂಟೆ ಕರಗ ಆರಂಭವಾಗಲಿದ್ದು, ನಾಡಿದ್ದು ಬೆಳಗ್ಗೆ 8 ಗಂಟೆಗೆ ದೇವಾಲಯಕ್ಕೆ ವಾಪಾಸ್ ಬರಬಹುದು.‌ ಹಿಂದಿನ ಸಂಪ್ರದಾಯದಂತೆ ಎಲ್ಲ ಪೇಟೆಗಳಲ್ಲಿಯೂ ಕರಗ ಮೆರವಣಿಗೆ ಈ ಬಾರಿಯೂ ಇರಲಿದೆ.

ಕರಗ ಮೆರವಣಿಗೆ ಮೊದಲು ಮಸ್ತಾನ್ ಸಾಬ್ ದರ್ಗಾ ಭೇಟಿ ಮಾಡಿ, ಅಣ್ಣಮ್ಮ ದೇವಾಲಯದ ಮೂಲಕ ತಿಗಳರಪೇಟೆಯಿಂದ ವಾಪಾಸ್ ಧರ್ಮರಾಯ ದೇಗುಲಕ್ಕೆ ಬರಲಿದೆ. ಸದ್ಯ ಕರಗಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು,‌ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಸೇರುವ ಸಾಧ್ಯಾತೆ ಇದೆ.‌‌ ಹೀಗಾಗಿ ಎಲ್ಲಿಯೂ ಕೊಂಚ ಸಮಸ್ಯೆಯು ಆಗದಂತೆ ವ್ಯವಸ್ಥೆ ಮಾಡಲಾಗಿದೆ.

ಕರಗಕ್ಕೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. 3 ಸಾವಿರ ಪೋಲಿಸರ ನಿಯೋಜನೆ ಮಾಡಲಾಗುತ್ತಿದ್ದು, 25 ಸಾವಿರ ಸಿಸಿಟಿವಿ ಅಳವಡಿಕೆ‌ ಮಾಡಲಾಗಿದೆ.‌ ಕರಗ ಮಹೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುವ ಸಾಧ್ಯತೆ ಇದೆ ಎಂದು ಕರಗ ಸಮಿತಿ ಅಧ್ಯಕ್ಷ ಸತೀಶ್ ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ