ಬೆಂಗಳೂರು : ಪೆನ್ಡ್ರೈವ್ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತಿ ದೂರು ನೀಡುವುದಕ್ಕೆ ಸಜ್ಜಾಗಿದ್ದಾರೆ ಎಂಬುದಾಗಿ ವರದಿಯಾಗಿದೆ. ತಮ್ಮ ತೇಜೋವಧೆ ಮಾಡಲಾಗುತ್ತಿದೆ ಎಂದು ಅವರು ಪ್ರತಿದೂರು ದಾಖಲಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಪೆನ್ಡ್ರೈವ್ ವಿಡಿಯೊ ಬಹಿರಂಗಗೊಂಡ ಬಳಿಕ ಅದನ್ನು ನನ್ನ ಹೆಸರಿಗೆ ತಳುಕು ಹಾಕಲಾಗುತ್ತಿದೆ. ಇದರಿಂದ ನನ್ನ ಕುಟುಂಬದ ಮಾನ ಹರಾಜಾಗುತ್ತಿದೆ ಎಂದು ಪ್ರಜ್ವಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನನ್ನ ವಿರುದ್ಧ ಮಾನಹಾನಿಕರವಾದಂತಹ ಆರೋಪಗಳನ್ನ ಮಾಡಲಾಗುತ್ತಿದೆ. ತನ್ನ ಕುಟುಂಬ ಹಾಗು ನನ್ನ ಮೇಲೆ ಕೀಳು ಮಟ್ಟದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ನನ್ನ ಭಾವಚಿತ್ರವನ್ನು ಮಾರ್ಫ್ ಮಾಡಿ ಹಂಚಿ ನನ್ನ ರಾಜಕೀಯ ಭವಿಷ್ಯಕ್ಕೆ ಕುಂದುಂಟು ಮಾಡಿದ್ದಾರೆ ಎಂದು ಪ್ರಜ್ವಲ್ ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಇಡೀ ಸಮಾಜದ ಮುಂದೆ ತನ್ನ ಹೆಸರನ್ನ ಬಳಸಿ ತೇಜೋವಧೆ ಮಾಡಲಾಗುತ್ತಿದೆ. ನನ್ನನ್ನು ಅತ್ಯಾಚಾರಿ ಎಂದು ಬಿಂಬಿಸಿ ತನ್ನ ಮಾನಕ್ಕೆ ಕುಂದುಂಟು ಮಾಡಿದ್ದಾರೆಂದು ದೂರು ನೀಡುವ ಸಾಧ್ಯತೆಯಿದೆ. ಈ ಕುರಿತು ಅವರು ವಕೀಲರ ಜತೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.