Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಕಾಶವಾಣಿಯ ರಾಷ್ಟ್ರೀಯ ಸರ್ವಭಾಷಾ ಕವಿ ಸಮ್ಮೇಳನಕ್ಕೆ ಪ್ರಕಾಶ ಖಾಡೆ ಆಯ್ಕೆ

ಬಾಗಲಕೋಟೆ ೨೪.-ಗಣರಾಜ್ಯೋತ್ಸವ ಅಂಗವಾಗಿ ಪ್ರತಿವರ್ಷ ಆಕಾಶವಾಣಿ ಹಮ್ಮಿಕೊಳ್ಳುವ ರಾಷ್ಟ್ರೀಯ ಬಹುಭಾಷಾ ಕವಿ ಸಮ್ಮೇಳನಕ್ಕೆ ಈ ಬಾರಿ ನಗರದ ಕವಿ ಡಾ.ಪ್ರಕಾಶ ಗ.ಖಾಡೆ ಆಯ್ಕೆಯಾಗಿದ್ದಾರೆ. ಜನೆವರಿ ೨೫ ರವಿವಾರ ಗಣರಾಜ್ಯೋತ್ಸವ ಮುನ್ನಾದಿನದಂದು ರಾಜ್ಯದ ಎಲ್ಲಾ ಬಾನುಲಿ ಕೇಂದ್ರಗಳಿಂದ ರಾತ್ರಿ ೧೦ ಗಂಟೆಗೆ ಕವಿ ಸಮ್ಮೇಳನ ಪ್ರಸಾರವಾಗಲಿದೆ. ಬೆಂಗಾಲಿ ಕವಿ ಸೌಮಿತ್ ಬಸು ಅವರ ಬೆಂಗಾಲಿ ಕವಿತೆಯ ಕನ್ನಡ ಅನುವಾದವನ್ನು ಡಾ.ಪ್ರಕಾಶ ಖಾಡೆ ವಾಚನ ಮಾಡಲಿದ್ದಾರೆ. ಭಾಷಾ ಬಾಂಧವ್ಯದ ಮೂಲಕ ರಾಷ್ಟ್ರೀಯ ಭಾವೈಕ್ಯತೆಯ ಘನ ಉದ್ದೇಶವನ್ನು ಹೊಂದಿರುವ ಈ ಕವಿ ಸಮ್ಮೇಳನದಲ್ಲಿ ದೇಶದ ಬೇರೆ ಬೇರೆ ರಾಜ್ಯಗಳ ಕವಿಗಳು ತಮ್ಮ ಭಾಷೆಯಲ್ಲಿ ಕವಿತೆ ವಾಚಿಸುತ್ತಾರೆ, ಹೀಗೆ ವಾಚಿಸಿದ ಸಂಸ್ಕೃತ, ಆಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಕಾಶ್ಮೀರಿ, ತೆಲಗು, ತಮಿಳು, ಮಲಯಾಳಂ, ಪಂಜಾಬಿ, ಸಿಂಧಿ, ಕೊಂಕಣಿ ಈ ಮೊದಲಾದ ಭಾಷೆಗಳಲ್ಲಿ ಅಲ್ಲಿನ ಕವಿಗಳು ಓದಿದ ಕವಿತೆಗಳನ್ನು ಕನ್ನಡದ ಕವಿಗಳು ಅನುವಾದ ಮಾಡಿ ವಾಚಿಸಲಿದ್ದು, ಬೆಂಗಾಲಿಯಿಂದ ಕನ್ನಡಕ್ಕೆ ಅನುವಾದಿಸಿದ ಕವಿತೆಯನ್ನು ಡಾ.ಖಾಡೆ ವಾಚಿಸಲಿದ್ದಾರೆ. ಲೇಖಕ, ಕಥೆಗಾರ, ಜಾನಪದ ತಜ್ಞರಾಗಿ ಗುರುತಿಸಿಕೊಂಡಿರುವ ಖಾಡೆಯವರು, ಕವಿಯಾಗಿಯೂ ಹೆಸರಾಗಿದ್ದಾರೆ, ಈ ವರೆಗೆ ಅವರ ಗೀತಚಿಗಿತ, ಸಾಲು ಹನಿಗಳು, ಕಣ್ಣುಗಳಿಗೆ ಮೌನ ಅರ್ಥವಾಗುತ್ತದೆ, ಶಾಂತಿ ಬೀಜಗಳ ಜತನ ಮೊದಲಾದ ಕವನ ಸಂಕಲನಗಳು ಪ್ರಕಟವಾಗಿವೆ. ಕವಿ ಖಾಡೆ ಅವರನ್ನು ಆಕಾಶವಾಣಿ ಧಾರವಾಡ ಕೇಂದ್ರದ ನಿರ್ದೇಶಕರಾದ ಶರಣಬಸವ ಚೋಳಿನ ಅಭಿನಂದಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*