Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಪ ಪುಣ್ಯದ ಫಲವು ಶೀಘ್ರವಾಗಿ ಲಭಿಸುತ್ತದೆ: ಪ್ರಣವಾನಂದ ಮಹಾಸ್ವಾಮಿ

ಹಳ್ಳೂರ 13. ಆಸ್ತಿ ಅದಿಕಾರ ನಮ್ಮ ಜೊತೆ ಬೆನ್ನು ಹತ್ತಿ ಬರೋದಿಲ್ಲ ಕಷ್ಟ ಕಾಲದಲ್ಲಿ ಸಹಾಯ ಮಾಡೋದಿಲ್ಲ ಸತ್ಯ ಧರ್ಮ ನಮ್ಮಲ್ಲಿದ್ದರೆ ದೇವರು ಸದಾಕಾಲ ರಕ್ಷಣೆ ಮಾಡುವನು ಬೇರೊಬ್ಬರ ಮನಸ್ಸು ನೋಯಿಸದೆ ಹೀನ ಕೃತ್ಯ ಮಾಡದೆ ಒಳ್ಳೆಯ ಕೆಲಸ ಕಾರ್ಯ ಮಾಡುತ್ತಾ ಜೀವನ ಸಾಗಿಸಿದರೆ ಮಾನವ ಜನ್ಮ ಸಾರ್ಥಕವಾಗುವುದು ಎಂದು ಪ್ರಣವಾನಂದ ಮಹಾಸ್ವಾಮಿಗಳು ಹೇಳಿದರು.

 ಅವರು ಗ್ರಾಮದಲ್ಲಿ ನಡೆದ ಶ್ರೀ ಸಿದ್ಧಾರೂಢ ಪರಮಾರ್ಥಿಕ ಮಹೋತ್ಸವದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ ಜೀವನದಲ್ಲಿ ಕಷ್ಟ ಕಾರ್ಪಣ್ಯಗಳು ಬಂದರು ಸಾವು ನೋವಿಗೂ ಹೆದರದೆ ಧೈರ್ಯದಿಂದ ಎದುರಿಸಿದಾಗ ಜೀವನಕ್ಕೆ ಒಂದು ಬೆಲೆ ಬರುತ್ತದೆ. ಜನರ ಕಣ್ಣು ತಪ್ಪಿಸಿ ಕೆಟ್ಟ ಕೆಲಸ ಮಾಡಿದರು ದೇವರ ದೃಷ್ಟಿಯಲ್ಲಿ ತಪ್ಪಿಸಲು ಸಾಧ್ಯವಿಲ್ಲ ಪಾಪ ಪುಣ್ಯದ ಫಲವು ಶೀಘ್ರವಾಗಿ ಲಭಿಸುತ್ತದೆ.

ಶಾಂತಿ ನೆಮ್ಮದಿಯು ಅಧಿಕಾರದಲ್ಲಿ ಶಾಂತಿ ಸಿಗೋದಿಲ್ಲ ಆತ್ಮ ಜ್ಞಾನ ಮಾಡಿಕೊಂಡರೆ ಮಾತ್ರ ಶಾಂತಿ ಸಿಗುತ್ತದೆ. ಶತ್ರುಗಳ ವಿರುದ್ಧ ವಾದ ಮಾಡಿ ತಲೆ ತಗೆಯುವ ಬದಲು ತಲೆಯಿಂದ ತಗೆದರೆ ಒಳ್ಳೆಯದಾಗುತ್ತದೆ ಎಂದು ಹೇಳಿದರು.

ಭಿಮಾನಂದ ಮಹಾಸ್ವಾಮಿಗಳು ಮಾತನಾಡಿ ಅಜ್ಞಾನಿಗೆ, ಹೆಣ್ಣು ಹೊನ್ನು ಮಣ್ಣು ಇದರ ಬೆನ್ನು ಹತ್ತಿದವರಿಗೆ ಶಾಂತಿ ಸಿಗದೆ ಅಶಾಂತಿ ಸಿಗುತ್ತದೆ. ಸಂಶಯ ಉಳ್ಳವನಿಗೆ ಸುಖ ಸಿಗುವದಿಲ್ಲ ಆಚರಣೆ ಧರ್ಮ ಕೇಳಿದರೆ ಸಾಲದು ಜೀವನದಲ್ಲಿ ಅಳವಡಿಸಿಕೊಳ್ಳಬೇಕು  ಗುರುವಿಲ್ಲದೇ ಮುಕ್ತಿ ದೊರೆಯಲು ಸಾಧ್ಯವಿಲ್ಲ ಎಂದು ಹೇಳಿದರು. ಈ ಸಮಯದಲ್ಲಿ ಶಿವಾನಂದ ಮಹಾಸ್ವಾಮಿಗಳು. ಸತ್ಯಪ್ಪ ಶರಣರು. ಶ್ರೀ ಸಿದ್ಧಾರೂಢ ಭಜನಾ ಮಂಡಳಿಯವರು ಕಾರ್ಯಕರ್ತರು ಹಾಗೂ ಗ್ರಾಮದ ಗುರು ಹಿರಿಯರಿದ್ದರು ಸರ್ವರಿಗೂ ಮಹಾಪ್ರಸಾದ ವ್ಯವಸ್ಥೆ ನಡೆಯಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ