ಗದಗ,ಮೇ,೦೬ : ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ರೈತ ಸುಖವಾಗಿದ್ದರೆ ದೇಶ ಸುಭಿಕ್ಷ ಎನ್ನುವ ಮಾತಿಗೆ ಜೀವ ನೀಡಿದ ರೈತ ಬಂಧು ಬಿ. ಎಸ್. ಯಡಿಯೂರಪ್ಪ ಅವರು ಸಕ್ರಿಯ ರಾಜಕೀಯ ಜೀವನದಲ್ಲಿ ಸಾರ್ಥಕ ೫೦ ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಇದೇ ಮೇ ೯ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ನಮ್ಮ ಗದಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಗದಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಪೂರ್ವಭಾವಿ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕರು, ಮಾಜಿ ಸಚಿವರಾದ ಸಿ.ಸಿ.ಪಾಟೀಲ, ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಎಂ.ಎಸ್.ಕರೀಗೌಡ್ರ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ನಿರ್ಮಲಾ ಕೊಳ್ಳಿ, ಗದಗ ನಗರ ಮಂಡಲ ಅಧ್ಯಕ್ಷರಾದ ಸುರೇಶ ಮರಳಪ್ಪನವರ ಗದಗ ಗ್ರಾಮೀಣ ಮಂಡಲ ಅಧ್ಯಕ್ಷರಾದ ಬೂದಪ್ಪ ಹಳ್ಳಿ, ಎಂ.ಎಂ.ಹಿರೇಮಠ, ಜಗನ್ನಾಥಸಾ ಭಾಂಡಗೆ, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಸಂತೋಷ ಅಕ್ಕಿ, ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಸುಧೀರ ಕಾಟಿಗರ, ಎಸ್.ಸಿ.ಮೋರ್ಚಾ ಜಿಲ್ಲಾಧ್ಯಕ್ಷರಾದ ಮಂಜುನಾಥ ಮುಳಗುಂದ, ಬಿಎಸ್ ಚಿಂಚಲಿ, ವಸಂತ ಮೇಟಿ, ಪ್ರದೀಪ ನವಲಗುಂದ, ಸುರೇಶ ಚಿತ್ತರಗಿ, ಅನೀಲ ಅಬ್ಬಿಗೇರಿ, ಉಮೇಶಗೌಡ ಪಾಟೀಲ, ಶಿವು ಹಿರೇಮನಿಪಾಟೀಲ, ಪ್ರಶಾಂತ ನಾಯ್ಕರ, ಮುತ್ತು ಮುಶಿಗೇರಿ, ಅಶೋಕ ಸಂಕಣ್ಣವರ, ಮಾಂತೇಶ ನಲವಡಿ, ನಾಗರಾಜ ತಳವಾರ, ಮಹೇಶ ದಾಸರ, ಮಂಜುನಾಥ ಶಾಂತಗೇರಿ, ಸುರೇಶ ಹೆಬಸೂರ, ಕುಮಾರ ಮಾರನಬಸರಿ, ಮಂಜುನಾಥ ಶಾಂತಗೇರಿ, ಶಂಕರ ಕರಿಬಿಷ್ಟಿ, ಬಸವರಾಜ ನರೆಗಲ್, ವಸಂತ ಹಬೀಬ, ಶಾರದಾ ಸಜ್ಜನರ, ಸ್ವಾತಿಅಕ್ಕಿ, ಪುಷ್ಪಾ ಪೂಜಾರ, ರೇಖಾ ಗವಳಿ, ರವಿ ಮಾನ್ವಿ, ವಿನೋದ ಹಂಸನೂರ ಹಾಗು ಇನ್ನೂ ಹಲವಾರು ಪ್ರಮುಖರುಗಳು ಉಪಸ್ಥೀತರಿದ್ದರು. ಕಾರ್ಯಕ್ರಮವನ್ನು ರಮೇಶ ಸಜ್ಜಗಾರ ನಿರೂಪಸಿದರು, ಶಂಕರ ಕಾಕಿ ವಂದಿಸಿದರು.
