Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

೭ನೇ ಅಂತರಾಷ್ಟ್ರೀಯ ದೇವಾಂಗ ವಧು-ವರರ ಸಮಾವೇಶದ ಪೂರ್ವಭಾವಿ ಸಭೆ

ಗದಗ ಎ12 : ಕಳೆದ ಎರಡೂವರೆ ದಶಕಗಳಿಂದ ಗದಗ ಜಿಲ್ಲಾ ದೇವಾಂಗ ನೌಕರರ ಸಂಘವು ಸಮಾಜಕ್ಕೆ ಉಪಯುಕ್ತವಾಗುವ ರಚನಾತ್ಮಕ ಕಾರ್ಯಕ್ರಮಗಳನ್ನು ಏರ್ಪಡಿಸುತ್ತ ಬಂದಿದೆ.

ರಾಷ್ಟ್ರಮಟ್ಟದ ಆರು ವಧು-ವರರ ಸಮಾವೇಶಗಳನ್ನು ಯಶಸ್ವಿಯಾಗಿ, ವ್ಯವಸ್ಥಿತವಾಗಿ ನೆರವೇರಿಸಿದೆ. ಇಂದಿನ ದಿನಗಳಲ್ಲಿ ವಧು-ವರರ ಸಮಾವೇಶ ಸಮಾಜ ಬಾಂಧವರಿಗೆ ಅತ್ಯಂತ ಅವಶ್ಯವಾಗಿದೆಯೆಂದು ಸಂಘದ ಅಧ್ಯಕ್ಷ ಆರ್ ಟಿ ಕೊಪ್ಪಳ ನುಡಿದರು.

ಜಿಲ್ಲಾ ದೇವಾಂಗ ನೌಕರರ ಸಂಘದಿಂದ ದಿ: ೧೦ ರಂದು ನಗರದ ಹಳೇ ಬನಶಂಕರಿ ದೇವಸ್ಥಾನದ ನೌಕರರ ಸಂಘದ ಕಾರ್ಯಾಲಯದಲ್ಲಿ ಆಯೋಜಿಸಿದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಗದಗ ಜಿಲ್ಲಾ ದೇವಾಂಗ ನೌಕರರ ಸಂಘದಿಂದ ಮುಂಬರುವ ಮೇ ತಿಂಗಳಿನ ದಿ: ೨೫ ಹಾಗೂ ೨೬ ರಂದು ೭ ನೇ ಅಂತತಾಷ್ಟ್ರೀಯ ವಧು-ವರರ ಸಮಾವೇಶವನ್ನು ಆಯೋಜಿಸಲಾಗಿದೆ.

ಇದರಲ್ಲಿ ದೇವಾಂಗ ಸಮಾಜದ ವಧು ವರರಿಗೆ ಹೆಸರು ನೋಂದಾಯಿಸಿಕೊಳ್ಳಲು ಆನ್ ಲೈನ್ ಲಿಂಕ್ ವಿಳಾಸವಿದೆ ಇದರಲ್ಲಿ ತಮ್ಮ ಸ್ವವಿರವನ್ನು
ದಿನಾಂಕ ೧೫-೫-೨೦೨೪ ರೊಳಗಾಗಿ ನೊಂದಾಯಿಸಿಕೊಳ್ಳುವಂತೆ ವಿನಂತಿಸಿದರು.

ದೇವಾಂಗ ನೌಕರರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಿವಾನಂದ ಗಿಡ್ನಂದಿ ಪ್ರಾಸ್ಥಾವಿಕವಾಗಿ ಮಾತನಾಡಿ ಸಂಘವು ೧೯೯೯ ರಂದು ಸ್ಥಾಪನೆಗೊಂಡು ಇಂದಿಗೆ ೨೫ ವರ್ಷಗಳನ್ನು ಪೂರೈಸಿದೆ. ಸಂಘವು ನಡೆದು ಬಂದ ದಾರಿಯ ಕುರಿತು ಮಾತನಾಡುತ್ತ ಸಂಸ್ಥಾಪಕ ಅಧ್ಯಕ್ಷ ಇ.ಜಿ ಚೋಳಿನ ಹಾಗೂ ಸೋಮಶೇಖರ ಘಾರ್ಗಿ ಇವರನ್ನು ನೆನೆದು ಇವರ ಸ್ಮರಣೆಯಲ್ಲಿ ಬೆಳ್ಳಿಹಬ್ಬವನ್ನು ಮೇ ತಿಂಗಳಿನಲ್ಲಿ ಆಚರಿಸಲಾಗುವುದು. ಇದರ ನಿಮಿತ್ತವಾಗಿ ಎಲ್ಲ
ಸದಸ್ಯರಿಗೆ ಸನ್ಮಾನಿಸಿ ಗೌರವಿಸುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸುವುದೆಂದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ