Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕರ ನೇಮಕಾತಿಯಲ್ಲಿ ಕೆಪಿಎಸ್‌ಗೆ ಆದ್ಯತೆ: ಎಐಡಿಎಸ್‌ಓ

ಬಳ್ಳಾರಿ,ಜೂ.11: ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಈ ಶೈಕ್ಷಣಿಕ ವರ್ಷದಲ್ಲಿ ೨,೫೦೦ ಐಟಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರವು ಘೋಷಿಸಿದೆ. ಆದರೆ ಎಲ್ಲ ಹುದ್ದೆಗಳನ್ನು ಕೇವಲ ಕೆಪಿಎಸ್ ಶಾಲೆಗಳಿಗೆ ನೀಡಲಾಗಿದೆ. ಕೆಲವು ದಿನಗಳ ಹಿಂದಷ್ಟೇ ೧೧,೦೦೦ ಅತಿಥಿ ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಈ ಹುದ್ದೆಗಳ ನೇಮಕಾತಿಯಲ್ಲೂ ಕೂಡ ಕೆಪಿಎಸ್ ಶಾಲೆಗಳಿಗೆ ಪ್ರಧಾನ ಆದ್ಯತೆ ನೀಡಲಾಗಿದೆ. ವರ್ಗಾವಣೆಯಲ್ಲೂ ಕೆಪಿಎಸ್‌ಗೆ ಪ್ರಾಶಸ್ತö್ಯ. ಈ ಮೂಲಕ ದಶಕಗಳಿಂದ ಹಳ್ಳಿಯ ಬಡ ಮಕ್ಕಳಿಗೆ ಶಿಕ್ಷಣದ ಬಾಗಿಲು ತೆರಿದಿದ್ದ ಹಳ್ಳಿಯ ಸರ್ಕಾರಿ ಶಾಲೆಗಳನ್ನು ಕಡೆಗಣಿಸಲಾಗಿದೆ. ಇತ್ತೀಚೆಗಷ್ಟೇ ಆರಂಭವಾದ ಕೆಪಿಎಸ್ ಶಾಲೆಗಳನ್ನು ಬೆಳೆಸಲಾಗುತ್ತಿದೆ. ಎಐಡಿಎಸ್‌ಓ ಬಳ್ಳಾರಿ ಜಿಲ್ಲಾ ಸಮಿತಿಯು ಖಂಡಿಸಿದೆ.
ಕೆಪಿಎಸ್‌ಗೆ ಈ ಹಳ್ಳಿಯ ಶಾಲೆಗಳ ವಿಲೀನವನ್ನು ವಿರೋಧಿಸಿ ಎಐಡಿಎಸ್‌ಓ ಹಾಗೂ ಸಾರ್ವಜನಿಕ ಶಿಕ್ಷಣ ಸಮಿತಿಯ ನೇತೃತ್ವದಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದೆ. ಸಾವಿರಾರು ಸರ್ಕಾರಿ ಶಾಲೆಗಳ ವಿಲೀನಕ್ಕೆ ನಾಡಿನ ಜನತೆ ತೀವ್ರ ಪ್ರತಿರೋಧವೊಡ್ಡಿದ್ದಾರೆ. ಆದರೆ ಈಗ ನೇರವಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚದೇ ನೇಮಕಾತಿ ಮೊದಲುಗೊಂಡAತೆ ಸರ್ಕಾರದ ಎಲ್ಲ ಸೌಕರ್ಯಗಳನ್ನು ಕೆಪಿಎಸ್ ಶಾಲೆಗಳಿಗೇ ನೀಡುವ ಮೂಲಕ ಹಳ್ಳಿಯ ಶಾಲೆಗಳ ಕೊಲೆಗೆ ಸರ್ಕಾರ ಮುಂದಾಗಿದೆ. ಇದು ನೇರವಾಗಿ ಕತ್ತುಹಿಸುಕದೇ ಔಷಧ ಮತ್ತು ಆರೈಕೆಯನ್ನು ನಿರಾಕರಿಸಿ ರೋಗಿಯೊಬ್ಬನನ್ನು ಕೊಲ್ಲುವ ಕುಕೃತ್ಯ!!
ರಾಜ್ಯದಲ್ಲಿ ೭ ಸಾವಿರ ಏಕೋಪಾಧ್ಯಾಯ ಶಾಲೆಗಳಿವೆ. ಅಧಿಕ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ಉತ್ತರ ಕರ್ನಾಟಕದ ಶಾಲೆಗಳಲ್ಲಿ; ಅದರಲ್ಲೂ ಕಲ್ಯಾಣ ಕರ್ನಾಟಕದ ಶಾಲೆಗಳು ಶಿಕ್ಷಕರ ತೀವ್ರ ಕೊರತೆ ಎದುರಿಸುತ್ತಿವೆ. ಸರ್ಕಾರವು ಕೂಡಲೇ ಇಂತಹ ಶಾಲೆಗಳಿಗೆ ಆದ್ಯತೆ ನೀಡಿ ಶಿಕ್ಷಕರನ್ನು ಒದಗಿಸಬೇಕೆಂದು ಎಐಡಿಎಸ್‌ಓ ರಾಜ್ಯ ಸಮಿತಿಯು ಆಗ್ರಹಿಸುತ್ತದೆ. ಈ ನಿಟ್ಟಿನಲ್ಲಿ ರಾಜ್ಯದ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಪ್ರೇಮಿ ಜನತೆ ‘ನಮ್ಮೂರ ಶಾಲೆ ಉಳಿಸಿ' ಹೋರಾಟವನ್ನು ತೀವ್ರಗೊಳಿಸಲು ಎಐಡಿಎಸ್‌ಓ ಕರೆ ನೀಡಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ