LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಮುಂದಿನ ರಾಜಕೀಯ ಬದಲಾವಣೆಯ  ಮುನ್ನುಡಿ: ಬಿ.ಎಸ್.ಯಡಿಯೂರಪ್ಪ

ಬಳ್ಳಾರಿ:11: ಬಳ್ಳಾರಿಯಲ್ಲಿ ಇಂದು ನಮ್ಮ ಪಾದಯಾತ್ರೆ ಇಂದು ಮುಕ್ತಾಯವಾಗಿದೆ. ಆದರೆ ನಮ್ಮ ಹೋರಾಟ ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವವರೆಗೆ ಮುಂದುವರಿಯಲಿದೆ. ರಾಯಚೂರಿನಿಂದ ಬಳ್ಳಾರಿವರೆಗಿನ ನಮ್ಮ ಹೆಜ್ಜೆಗಳು ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಬಡಿದೆಬ್ಬಿಸಿ ಮುಂದಿನ ರಾಜಕೀಯ ಬದಲಾವಣೆ ಮುನ್ನುಡಿ ಬರೆಯಲಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. 
ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಇಂದು ಮಾತನಾಡಿದ ಅವರು, ವಿಜಯೇಂದ್ರ ಅವರ ನೇತೃತ್ವದಲ್ಲಿ ಹತ್ತು ದಿನ ಪಾದಯಾತ್ರೆ ನಡೆದಿದೆ. ಈ ವೇಳೆ ಪಾದಯಾತ್ರೆಯ ದಾರಿಯುದ್ದಕ್ಕೂ ಜನ ಬೆಂಬಲ ನೀಡಿ, ಆಶೀರ್ವಾದ ಮಾಡಿದರು. ತಿಲಕ ಇಟ್ಟು ಆರತಿ ಬೆಳಗಿದರು. ಇದನ್ನು ನಾವು ಊಹಿಸಲು ಸಾಧ್ಯವಿಲ್ಲ ಎಂದರು. 
ಮುಂದೆ ನಮ್ಮ ಬಿಜೆಪಿ ಸರ್ಕಾರ ತರುವವರೆಗೆ ನಮ್ಮ ಹೋರಾಟ ನಡೆಯಲಿದೆ. ಇದು ನಾವು ಮಾಡಿದ ಕೇವಲ ಪಾದಯಾತ್ರೆ ಅಲ್ಲ. ಜನರು ಬಯಸಿದ ಪರಿವರ್ತನೆಯ ಮುನ್ನುಡಿ. ಬಿಸಲ ಬೇಗೆಯನ್ನು ಎದುರಿಸಿ ಪಾದಯಾತ್ರೆ ನಡೆದಿದೆ. ನಾಡಿನ ಮತ್ತು ದೇಶದ ಗಮನ ಸೆಳೆದಿದೆ ಎಂದು ಹೇಳಿದರು. ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವವರೆಗೆ ನಾವು ವಿಶ್ರಮಿಸುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನಡೆಸಿದ ಭ್ರμÁ್ಟಚಾರವನ್ನು ಬಯಲು ಮಾಡಿ ಬದಲಾವಣೆ ತರುತ್ತೇವೆ ಎಂದು ಸವಾಲು ಹಾಕಿದರು. 
ಬಿಜೆಪಿ ಜಾರಿಗೆ ತಂದ ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ನಿಲ್ಲಿಸಿತು. ಕಿಸಾನ್ ಸಮ್ಮಾನ್ ನಿಧಿಯಲ್ಲಿ ಹಣ ಕಡಿಮೆ ಮಾಡಿದರು. ಭಾಗ್ಯಲಕ್ಷ್ಮಿ ಬಾಂಡ್ ನೀಡಲಿಲ್ಲ. ಬಡವರ ಹಣ ಹೊಡೆದು ಲೂಟಿ ಮಾಡಿದರು ಎಂದು ದೂರಿದರು. 
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿ ಕಾಂಗ್ರೆಸ್ ಮೇಲೇಳದಂತೆ ಕೆಲಸ ಮಾಡೋಣ ಎಂದ ಅವರು, ಪಾದಯಾತ್ರೆಗೆ ಉತ್ತಮ ಪ್ರಚಾರ ನೀಡಿದ ಮಾಧ್ಯಮಳಿಗೆ ಅಭಿನಂದನೆ ಸಲ್ಲಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ**ಶ್ರೀ ವರದ ಶಂಕರ ಪೂಜೆ ಮತ್ತು ಮಹಾಪ್ರಸಾದ**ರೈತರಿಂದ ಮತ್ತು ಬಿಜೆಪಿಯಿಂದ  ಲೋಡ್ ಶೆಡ್ಡಿಂಗ್ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ. ತನವ್ ಮೋಹನ್ ಗೆ ವರ್ಷದ ಕನ್ನಡಿಗ ಪ್ರಶಸ್ತಿರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪಿ.ಟಿ. ಪರಮೇಶ್ವರ ನಾಯ್ಕ ಪ್ರವಾಸಸಮಾಜ ಸಂಘಟನೆಯಲ್ಲಿ ಹಾನಗಲ್ ಕುಮಾರಸ್ವಾಮಿಗಳ ಕೊಡುಗೆ ಅನನ್ಯ-ಪ್ರೊ ಮಿಥುನ ಅಂಕಲಿ ಅಭಿಮತಬಳ್ಳಾರಿ: ಕಂಪ್ಲಿ ಮತ್ತು ಕುಡುತಿನಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ - ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಮಾದಕ ವ್ಯಸನಮುಕ್ತ ಸಮಾಜದಿಂದ ಮಾತ್ರ ಸದೃಢ ದೇಶ ನಿರ್ಮಾಣ ಸಾಧ್ಯ: ಡಾ. ವೀರೇಂದ್ರ ಕುಮಾರ್ ಕರೆಗುಣಾತ್ಮ ಶಿಕ್ಷಣ, ಒಳ್ಳೆಯ ಸಂಸ್ಕಾರ ನೀಡುವುದು ಶಿಕ್ಷಕರ ಆಧ್ಯ ಕರ್ತವ್ಯ: ಶಾಸಕ ಂiಶವಂತರಾಯಗೌಡ ಪಾಟೀಲಬರ ಪೀಡಿತ ತಾಲೂಕು ಘೋಷಣೆ ಶೇ.೨೦೦ ಖಚಿತ-ಶಾಸಕ ನಾಡಗೌಡ