LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಆಗಸ್ಟ್ 21ರಂದು ಮೈಸೂರಿಗೆ ಗಜಪಯಣ ನಿಗದಿ ಹಿನ್ನೆಲೆ ಅರಣ್ಯ ಇಲಾಖೆ ಸಿದ್ಧತೆ

ಮೈಸೂರು, ಆಗಸ್ಟ್​.12: ನಾಡಹಬ್ಬ ದಸರಾ ಮಹೋತ್ಸವದ ಗಜಪಯಣ ಆ.21ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿದ್ಧತೆ ಆರಂಭಿಸಿದೆ. ಸದ್ಯ ದಸರಾಗಾಗಿ 18 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದ್ದು 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿದೆ. ಆಗಸ್ಟ್ 21ರಂದು ಮೈಸೂರಿಗೆ ಗಜಪಯಣ ನಿಗದಿ ಹಿನ್ನೆಲೆ ನಾಲ್ಕು ಹೆಚ್ಚುವರಿ ಆನೆಗಳನ್ನು ಸಹ ಇಲಾಖೆ ಗುರುತಿಸಿದೆ

ಈ ಬಾರಿಯೂ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ಹೆಗಲಿಗಿದೆ. 14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿದ್ದು ಎರಡನೇ ಹಂತದಲ್ಲಿ ಐದು ಆನೆಗಳನ್ನು ಕರೆ ತರಲು ತಯಾರಿ ನಡೆಯುತ್ತಿದೆ. ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು, ಭೀಮ, ಏಕಲವ್ಯ, ವರಲಕ್ಷ್ಮೀ, ಧನಂಜಯ, ಗೋಪಿ, ರೋಹಿತ, ಕಂಜನ್ ಆಗಮಿಸಲಿದ್ದು ಬಳಿಕ ಪ್ರಶಾಂತ, ಸುಗ್ರೀವ, ಮಹೇಂದ್ರ, ಲಕ್ಷ್ಮೀ, ಹಿರಣ್ಯ ಆಗಮಿಸಲಿದ್ದಾರೆ.

ಈ ಬಾರಿಯೂ ಒಟ್ಟು 14 ಆನೆಗಳನ್ನು ವಿವಿಧ ಶಿಬಿರಗಳಿಂದ ಕರೆತರಲಾಗುತ್ತಿದೆ.  ಮೊದಲ ತಂಡದ 9 ಆನೆಗಳಿಗೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ 21ರಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರು ಮಾಹಿತಿ ನೀಡಿದ್ದಾರೆ.

‘ಎರಡನೇ ತಂಡದಲ್ಲಿ 5 ಆನೆಗಳಿರಲಿದ್ದು, 4 ಆನೆಗಳನ್ನು ತುರ್ತು ಸನ್ನಿವೇಶಗಳಿಗೆ ಮೀಸಲಿರಿಸಲಾಗಿದೆ. ಆ.12ರಂದು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಜಿಕೆವಿಕೆ ಆವರಣದಲ್ಲಿ ಮಾನವ – ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತರರಾಷ್ಟ್ರೀಯ ಸಮಾವೇಶ ನಡೆಯಲಿದ್ದು, ಅಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಸರಾ ಉನ್ನತ ಮಟ್ಟದ ಸಭೆಯೂ ನಡೆಯಲಿದೆ ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್