Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಗಸ್ಟ್ 21ರಂದು ಮೈಸೂರಿಗೆ ಗಜಪಯಣ ನಿಗದಿ ಹಿನ್ನೆಲೆ ಅರಣ್ಯ ಇಲಾಖೆ ಸಿದ್ಧತೆ

ಮೈಸೂರು, ಆಗಸ್ಟ್​.12: ನಾಡಹಬ್ಬ ದಸರಾ ಮಹೋತ್ಸವದ ಗಜಪಯಣ ಆ.21ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿದ್ಧತೆ ಆರಂಭಿಸಿದೆ. ಸದ್ಯ ದಸರಾಗಾಗಿ 18 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದ್ದು 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿದೆ. ಆಗಸ್ಟ್ 21ರಂದು ಮೈಸೂರಿಗೆ ಗಜಪಯಣ ನಿಗದಿ ಹಿನ್ನೆಲೆ ನಾಲ್ಕು ಹೆಚ್ಚುವರಿ ಆನೆಗಳನ್ನು ಸಹ ಇಲಾಖೆ ಗುರುತಿಸಿದೆ

ಈ ಬಾರಿಯೂ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ಹೆಗಲಿಗಿದೆ. 14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿದ್ದು ಎರಡನೇ ಹಂತದಲ್ಲಿ ಐದು ಆನೆಗಳನ್ನು ಕರೆ ತರಲು ತಯಾರಿ ನಡೆಯುತ್ತಿದೆ. ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು, ಭೀಮ, ಏಕಲವ್ಯ, ವರಲಕ್ಷ್ಮೀ, ಧನಂಜಯ, ಗೋಪಿ, ರೋಹಿತ, ಕಂಜನ್ ಆಗಮಿಸಲಿದ್ದು ಬಳಿಕ ಪ್ರಶಾಂತ, ಸುಗ್ರೀವ, ಮಹೇಂದ್ರ, ಲಕ್ಷ್ಮೀ, ಹಿರಣ್ಯ ಆಗಮಿಸಲಿದ್ದಾರೆ.

ಈ ಬಾರಿಯೂ ಒಟ್ಟು 14 ಆನೆಗಳನ್ನು ವಿವಿಧ ಶಿಬಿರಗಳಿಂದ ಕರೆತರಲಾಗುತ್ತಿದೆ.  ಮೊದಲ ತಂಡದ 9 ಆನೆಗಳಿಗೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ 21ರಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರು ಮಾಹಿತಿ ನೀಡಿದ್ದಾರೆ.

‘ಎರಡನೇ ತಂಡದಲ್ಲಿ 5 ಆನೆಗಳಿರಲಿದ್ದು, 4 ಆನೆಗಳನ್ನು ತುರ್ತು ಸನ್ನಿವೇಶಗಳಿಗೆ ಮೀಸಲಿರಿಸಲಾಗಿದೆ. ಆ.12ರಂದು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಜಿಕೆವಿಕೆ ಆವರಣದಲ್ಲಿ ಮಾನವ – ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತರರಾಷ್ಟ್ರೀಯ ಸಮಾವೇಶ ನಡೆಯಲಿದ್ದು, ಅಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಸರಾ ಉನ್ನತ ಮಟ್ಟದ ಸಭೆಯೂ ನಡೆಯಲಿದೆ ಎಂದು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ