LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸಚಿವೆ ಸೀತಾರಾಮನ್ ಗೆ ಸಿಹಿ ಮೊಸರು ತಿನ್ನಿಸಿ ಶುಭ ಹಾರೈಸಿದ ರಾಷ್ಟ್ರಪತಿ ಮುರ್ಮು

ನವದೆಹಲಿ: ಇನ್ನೇನು ಕೆಲವೇ ಕ್ಷಣಗಳಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಆರ್ಥಿಕ ವರ್ಷದ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರಕ್ಕೇರಿದ ಬಳಿಕ ಮಂಡನೆಯಾಗುತ್ತಿರುವ ಮೊದಲ ಬಜೆಟ್ ಇದಾಗಿರುವುದರಿಂದ ಸಹಜವಾಗಿಯೇ ಜನರ ಕುತೂಹಲ ಹೆಚ್ಚಾಗಿದೆ. ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಹಿ ಮೊಸರು ತಿನ್ನಿಸಿ ಶುಭ ಹಾರೈಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಜುಲೈ 23) ರಾಷ್ಟ್ರಪತಿ ಭವನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ 2024ರ ಬಜೆಟ್ ಮಂಡನೆಗೆ ಮುನ್ನ ಸಿಹಿ ಹಾಕಿದ ಮೊಸರು ತಿನ್ನಿಸಿದರು. ಇದನ್ನು ಅದೃಷ್ಟದ ಸಂಕೇತ ಎಂದು ಪರಿಗಣಿಸಲಾಗುತ್ತದೆ. ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿಗೆ ತೆರಳುವ ಮೊದಲು ರಾಷ್ಟ್ರಪತಿಗಳನ್ನು ಭೇಟಿ ಮಾಡಲು ರಾಷ್ಟ್ರಪತಿ ಭವನಕ್ಕೆ ಆಗಮಿಸಿದರು. ಇಂದು ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆಯಾಗಲಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿರ್ಣಾಯಕ ಎರಡನೇ ಅವಧಿಗೆ ಆಯ್ಕೆಯಾದಾಗ 2019ರಲ್ಲಿ ಭಾರತದ ಮೊದಲ ಪೂರ್ಣ ಸಮಯದ ಮಹಿಳಾ ಹಣಕಾಸು ಮಂತ್ರಿಯಾದ ನಿರ್ಮಲಾ ಸೀತಾರಾಮನ್ ಅವರು ಅಂದಿನಿಂದ ಪ್ರತಿ ವರ್ಷವೂ ಕೇಂದ್ರ ಬಜೆಟ್ ಅನ್ನು ನಿರಂತರವಾಗಿ ಮಂಡಿಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್