LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸಾಂವಿಧಾನಿಕ ಬಿಕ್ಕಟ್ಟಿನಿಂದ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ

ನವದೆಹಲಿ: ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ವೈಫಲ್ಯ ಎಂದು ನೇರವಾಗಿ ಒಪ್ಪಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ ಮತ್ತು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

ಈ ಕುರಿತು X ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಣಿಪುರದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಇದು ರಾಷ್ಟ್ರಪತಿ ಆಳ್ವಿಕೆ ಹೇರಲು ಕಾರಣವಾಯಿತು ಎಂದು ಹೇಳಿದ್ದಾರೆ.

"ನರೇಂದ್ರ ಮೋದಿ ಜೀ, ಕೇಂದ್ರದಲ್ಲಿ 11 ವರ್ಷಗಳಿಂದ ಆಡಳಿತ ನಡೆಸುತ್ತಿರುವುದು ನಿಮ್ಮ ಪಕ್ಷ. ಎಂಟು ವರ್ಷಗಳಿಂದ ಮಣಿಪುರವನ್ನು ಆಳುತ್ತಿರುವುದು ನಿಮ್ಮ ಪಕ್ಷ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಬಿಜೆಪಿಯದ್ದು. ರಾಷ್ಟ್ರೀಯ ಭದ್ರತೆ ಮತ್ತು ಗಡಿ ಗಸ್ತು ಜವಾಬ್ದಾರಿ ನಿಮ್ಮ ಸರ್ಕಾರದ್ದು. ನಿಮ್ಮ ಸ್ವಂತ ಪಕ್ಷದ ಸರ್ಕಾರವನ್ನು ಅಮಾನತುಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು ನಿಮ್ಮ ಸರ್ಕಾರದ ವೈಫಲ್ಯವನ್ನು ನೇರ ಒಪ್ಪಿಕೊಂಡಂತಾಗಿದೆ" ಎಂದು ಖರ್ಗೆ ಹೇಳಿದರು.

ಕೇಂದ್ರ ಸರ್ಕಾರ ತಾನು ಬಯಸಿ ರಾಷ್ಟ್ರಪತಿ ಆಳ್ವಿಕೆ ಹೇರಿಲ್ಲ, ಬದಲಾಗಿ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಇರುವುದರಿಂದ, ಯಾವುದೇ ಎನ್‌ಡಿಎ ಶಾಸಕರು "ನಿಮ್ಮ ಅಸಮರ್ಥತೆಯ ಹೊರೆಯನ್ನು"ಒಪ್ಪಿಕೊಳ್ಳಲು ಸಿದ್ಧರಿಲ್ಲದ ಕಾರಣ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿದ್ದೀರಿ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್