LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವೀಕೆಂಡ್​ ಸಂಸ್ಕೃತ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಮೆಚ್ಚುಗೆ

ಬೆಂಗಳೂರು: ವಿವಿಧ ಚಟುವಟಿಕೆಗಳ ಮೂಲಕ ಪ್ರಾಚೀನ ಭಾಷೆಯಾದ ಸಂಸ್ಕೃತವನ್ನು ಎತ್ತಿ ಹಿಡಿಯಲು ಮಕ್ಕಳು, ಯುವಕರು ಮತ್ತು ಹಿರಿಯರಿಗೆ ಸಹಾಯ ಮಾಡುವ ಬೆಂಗಳೂರಿನ ಸಮಷ್ಠಿ ಗುಬ್ಬಿ ಅವರ ವೀಕೆಂಡ್​ ಸಂಸ್ಕೃತ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಭಾನುವಾರ ಮಾತನಾಡಿದ ಮೋದಿಯವರು. ಕಬ್ಬನ್​ಪಾರ್ಕ್ ನಲ್ಲಿ ವಾರಾಂತ್ಯದ ವೇಳೆ ನಡೆಯುವ ಸಂಸ್ಕೃತ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಾಚೀನ ಭಾರತೀಯ ಜ್ಞಾನ ಮತ್ತು ವಿಜ್ಞಾನದ ಪ್ರಕ್ರಿಯೆಯಲ್ಲಿ ಸಂಸ್ಕೃತವು ದೊಡ್ಡ ಪಾತ್ರವನ್ನು ವಹಿಸಿದೆ. ಇಂದು ನಾವು ಸಂಸ್ಕೃತಕ್ಕೆ ಸರಿಯಾದ ಗೌರವವನ್ನು ನೀಡಬೇಕು ಮತ್ತು ಅದನ್ನು ನಮ್ಮ ದೈನಂದಿನ ಜೀವನದೊಂದಿಗೆ ಅಳವಡಿಸಿಕೊಳ್ಳಬೇಕು. ಪ್ರತಿ ಭಾನುವಾರ ಕಬ್ಬನ್ ಪಾರ್ಕ್‌ನಲ್ಲಿ ಸೇರುವ ಜನರು ಸಂಸ್ಕೃತಿದಲ್ಲಿಯೇ ಮಾತನಾಡುತ್ತಾರೆ. ಹಿರಿಯರು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಬಗ್ಗೆ ಇಲ್ಲಿಗೆ ಬಂದು ಸಂಸ್ಕೃತ ಭಾಷೆಯಲ್ಲಿಯೇ ಚರ್ಚೆ ನಡೆಸುತ್ತಾರೆ. ನಮ್ಮ ಭಾಷೆ ಉಳಿಸುವ ನಿಟ್ಟಿನಲ್ಲಿ ಇದು ದೊಡ್ಡಮಟ್ಟದ ಕೆಲಸವಾಗಿದೆ. ಜನರು ಸ್ವಯಂ ಪ್ರೇರಿತವಾಗಿ ಇಲ್ಲಿಗೆ ಬಂದು ಸಂಸ್ಕೃತ ಭಾಷೆಯನ್ನು ಆನಂದಿಸುತ್ತಾರೆಂದು ಹೇಳಿದರು.

ಈ ಕಾರ್ಯಕ್ರಮವನ್ನು ಸಮಷ್ಟಿ ಗುಬ್ಬಿ ಜಿಯವರು ವೆಬ್‌ಸೈಟ್ ಮೂಲಕ ಪ್ರಾರಂಭಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಆರಂಭವಾದ ಈ ಪ್ರಯತ್ನ ಬೆಂಗಳೂರಿನ ಜನರಲ್ಲಿ ಬಹುಬೇಗ ಜನಪ್ರಿಯವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ