ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸುತ್ತದೆ ಮತ್ತು ಶಿಕ್ಷಿಸುತ್ತದೆ. ಉಗ್ರರನ್ನು ಹುಡುಕಿ ಹುಡುಕಿ ಹಿಡಿಯುತ್ತೇವೆ ಎನ್ನುವ ಮೂಲಕ ಪಾಕ್ಗೆ ಜತೆಗೆ ವಿಶ್ವಕ್ಕೂ ಸ್ಪಷ್ಟ ಸಂದೇಶವನ್ನು ಅಂದು ನೀಡಿದರು. ಆಪರೇಷನ್ ಸಿಂದೂರದ ಬಳಿಕ ಸೇನೆಯ ಜತೆಗೆದ ಗಂಭೀರ ಚರ್ಚೆಗಳನ್ನು ನಡೆಸಿದ್ದಾರೆ. ಮೂರು ಸೇನೆಗಳ ಮುಖ್ಯಸ್ಥರ ಜತೆಗೆ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಅನೇಕ ಅಧಿಕಾರಿಗಳೊಂದಿಗೆ ನಿರಂತರ ಸಮಾಲೋಚನೆಯನ್ನು ಮಾಡುತ್ತಿದ್ದರು. ನಂತರ ಪಾಕ್ ಮತ್ತು ಭಾರತ ನಡುವಿನ ಯುದ್ಧಕ್ಕೆ ಕದನ ವಿರಾಮ ಘೋಷಣೆಯನ್ನು ಮಾಡಿದ ನಂತರವು ಕೂಡ ಅವರು ಸಭೆಗಳನ್ನು ನಡೆಸಿ, ಮುಂದಿನ ನಿಲುವುಗಳೇನು ಎಂಬ ಬಗ್ಗೆಯೂ ಸ್ಪಷ್ಟವಾಗಿ ಹೇಳಿದರು. ಇದೀಗ ದೇಶದ ಜನರನ್ನು ಉದ್ದೇಶಿ ಮಾತನಾಡಲಿದ್ದಾರೆ.
ಇಂದು ಮೂರು ಸೇನೆಯ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ನಮ್ಮ ಎಲ್ಲಾ ಸೈನಿಕ ನೆಲೆಗಳು ಹಾಗೂ ಉಪಕರಣಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿವೆ, ಯಾವುದೇ ಪರಿಸ್ಥಿತಿ ಎದುರಿಸಲು ಸೇನೆ ಸನ್ನದ್ಧವಾಗಿದೆ ಎಂದು ಡಿಜಿಎಂಒ ರಾಜೀವ್ ಘಾಯ್ ತಿಳಿಸಿದ್ದಾರೆ. ಇನ್ನು ಕದನ ವಿರಾಮದ ನಂತರ ಇಂದು 12.30ಕ್ಕೆ ಪಾಕ್ ಹಾಗೂ ಭಾರತದ ಡಿಜಿಎಂಒ ಸಭೆ ನಡೆಯಬೇಕಿತ್ತು. ಇದೀಗ ಈ ಸಭೆಯನ್ನು 5 ಗಂಟೆಗೆ ಮೂಂದೂಡಲಾಗಿದೆ.
ಪಾಕಿಸ್ತಾನಕ್ಕೆ ಮೋದಿ ಸರ್ಕಾರ ದೊಡ್ಡ ಎಚ್ಚರಿಕೆಯೊಂದನ್ನು ನೀಡಿದೆ. ‘ಭಾರತದ ವಿರುದ್ಧ ಭವಿಷ್ಯದಲ್ಲಿ ನಡೆಯುವ ಯಾವುದೇ ರೀತಿಯ ಭಯೋತ್ಪಾದಕ ಕೃತ್ಯವನ್ನು ಭಾರತದ ವಿರುದ್ಧದ ಯುದ್ಧ ಕೃತ್ಯವೆಂದು ಪರಿಗಣಿಸಲಾಗುತ್ತದೆ’ ಎಂದು ಭಾರತ ಸರ್ಕಾರ ಪಾಕಿಸ್ತಾನಕ್ಕೆ ಇಂದು ಖಡಕ್ ವಾರ್ನಿಂಗ್ ನೀಡಿದೆ. ಪದೇಪದೇ ಭಾರತದ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ಈ ಮೂಲಕ ಭಾರತ ಕೊನೆಯ ಎಚ್ಚರಿಕೆ ನೀಡಿದೆ.