LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

ದೆಹಲಿ, ಮೇ.12: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸೇನೆ ನಡೆಸಿದ ಆಪರೇಷನ್​​ ಸಿಂದೂರ್​​​​​​ ಬಗ್ಗೆ ಕೂಡ ಮಾತನಾಡಬಹುದು. ಹಾಗೂ ಭಾರತದ ಪಾಕ್ ವಿರುದ್ಧ ನಡೆಸಿದ ಸೇನಾ ಕಾರ್ಯಚರಣೆ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದು ಪ್ರಧಾನಿ ಮೋದಿ ಅವರು ಆಪರೇಷನ್​​ ಸಿಂದೂರ್​​​ ನಂತರ ಮಾಡುತ್ತಿರುವ ಮೊದಲು ಭಾಷಣವಾಗಿದೆ. ಬಿಹಾರದಲ್ಲಿ ಆಪರೇಷನ್​​​ ಸಿಂದೂರಕ್ಕೂ ಮುನ್ನ, ಯಾವುದೇ ಕಾರಣಕ್ಕೂ ಉಗ್ರರನ್ನು ಬಿಡುವುದಿಲ್ಲ. ಅವರ ನಾಶ ಮಾಡುವುದು ಖಂಡಿತ. ಅದರಲ್ಲೂ ಮೋದಿ ಅವರು ಸಾಮಾನ್ಯವಾಗಿ ಹಿಂದಿಯಲ್ಲೇ ಭಾಷಣ ಮಾಡೋದು, ಆದರೆ ಅಂದು ಜಗತ್ತಿನ ಎಲ್ಲ ದೇಶಗಳಿಗೆ ಸ್ಪಷ್ಟವಾಗಿ ತಿಳಿಸುವ ಉದ್ದೇಶದಿಂದ ಬಿಹಾರದ ಕಾರ್ಯಕ್ರಮದಲ್ಲಿ ಇಂಗ್ಲಿಷ್​​ನಲ್ಲಿ ಮಾತನಾಡಿದ್ದಾರೆ.





ಇಂದು ಮೂರು ಸೇನೆಯ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ನಮ್ಮ ಎಲ್ಲಾ ಸೈನಿಕ ನೆಲೆಗಳು ಹಾಗೂ ಉಪಕರಣಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿವೆ, ಯಾವುದೇ ಪರಿಸ್ಥಿತಿ ಎದುರಿಸಲು ಸೇನೆ ಸನ್ನದ್ಧವಾಗಿದೆ ಎಂದು ಡಿಜಿಎಂಒ ರಾಜೀವ್ ಘಾಯ್ ತಿಳಿಸಿದ್ದಾರೆ. ಇನ್ನು ಕದನ ವಿರಾಮದ ನಂತರ ಇಂದು 12.30ಕ್ಕೆ ಪಾಕ್ ಹಾಗೂ ಭಾರತದ ಡಿಜಿಎಂಒ ಸಭೆ ನಡೆಯಬೇಕಿತ್ತು. ಇದೀಗ ಈ ಸಭೆಯನ್ನು 5 ಗಂಟೆಗೆ ಮೂಂದೂಡಲಾಗಿದೆ.

ಪಾಕಿಸ್ತಾನಕ್ಕೆ ಮೋದಿ ಸರ್ಕಾರ ದೊಡ್ಡ ಎಚ್ಚರಿಕೆಯೊಂದನ್ನು ನೀಡಿದೆ. ‘ಭಾರತದ ವಿರುದ್ಧ ಭವಿಷ್ಯದಲ್ಲಿ ನಡೆಯುವ ಯಾವುದೇ ರೀತಿಯ ಭಯೋತ್ಪಾದಕ ಕೃತ್ಯವನ್ನು ಭಾರತದ ವಿರುದ್ಧದ ಯುದ್ಧ ಕೃತ್ಯವೆಂದು ಪರಿಗಣಿಸಲಾಗುತ್ತದೆ’ ಎಂದು ಭಾರತ ಸರ್ಕಾರ ಪಾಕಿಸ್ತಾನಕ್ಕೆ ಇಂದು ಖಡಕ್ ವಾರ್ನಿಂಗ್ ನೀಡಿದೆ. ಪದೇಪದೇ ಭಾರತದ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ಈ ಮೂಲಕ ಭಾರತ ಕೊನೆಯ ಎಚ್ಚರಿಕೆ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್