ಅಪಘಾತದಲ್ಲಿ ಗಾಯಗೊಂಡವರಿಗೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಸೂಕ್ತ ಚಿಕಿತ್ಸೆ ನೀಡಬೇಕು. ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡುವ ಹಾಗಿಲ್ಲ. ಒಂದು ವೇಳೆ ಮುಂಗಡ ಹಣಕ್ಕೆ ಒತ್ತಾಯಿಸಿದರೆ ಜೈಲು ಶಿಕ್ಷೆ ವಿಧಿಸಲಾಗುವುದು.
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007ರ ನಿಬಂಧನೆ ಅಡಿಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಮಾತ್ರವಲ್ಲದೆ, ಆಕಸ್ಮಿಕ ಅಥವಾ ಪ್ರೇರಿತ ಬೆಂಕಿ ಅವಘಡಗಳು, ವಿಷಪ್ರಾಶನ ಮತ್ತು ಕ್ರಿಮಿನಲ್ ಹಲ್ಲೆ ಪ್ರಕರಣಗಳು ಒಳಗೊಂಡಿದೆ.