LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಡಾ ಹಗರಣದಲ್ಲಿ  ಸಿಎಂ ವಿರುದ್ಧ ಖಾಸಗಿ ದೂರು; ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ



ಬೆಂಗಳೂರು: ಮುಡಾ ಹಗರಣದಲ್ಲಿ  ಪತ್ನಿಯ ಹೆಸರಲ್ಲಿ ಬದಲಿ ನಿವೇಶನ ಪಡೆದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ  ವಿರುದ್ಧ ಖಾಸಗಿ ದೂರು ದಾಖಲು ಮಾಡಲು ಬಿಜೆಪಿ  ಚಿಂತನೆ ನಡೆಸಿದೆ. ಈ ಕುರಿತು ಇಂದು ಸಂಜೆ ರಾಜ್ಯಪಾಲರನ್ನು ಬಿಜೆಪಿ ನಿಯೋಗ ಭೇಟಿ ಮಾಡಲು ಮುಂದಾಗಿದೆ.




ಪತ್ನಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದಿರುವ ಮಾಹಿತಿಯನ್ನು ಚುನಾವಣಾ ಸಂದರ್ಭದಲ್ಲಿ ನೀಡಲಾದ ಪ್ರಮಾಣ ಪತ್ರದಲ್ಲಿ ಮುಚ್ಚಿಡಲಾಗಿದೆ. ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ಕಾನೂನು ಹೋರಾಟಕ್ಕೆ ಬಿಜೆಪಿ ಪ್ಲಾನ್ ಮಾಡಿದೆ.


ಈ ಬಗ್ಗೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವಂತೆ ಬಿಜೆಪಿ ನಿಯೋಗ ಮನವಿ ಕೊಡಲಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಬಿಜೆಪಿ ನಾಯಕರು ಖಾಸಗಿ ದೂರು ದಾಖಲು ಮಾಡಲಿದ್ದಾರೆ. 2011ರಲ್ಲಿ ಯಡಿಯೂರಪ್ಪ ವಿರುದ್ಧವೂ ರಾಜ್ಯಪಾಲರು ಖಾಸಗಿ ದೂರು ದಾಖಲು ಮಾಡಲು ಅನುಮತಿ ನೀಡಿದ್ದರು. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ಈ ಕೇಸ್, ಮುಡಾ ಕುರಿತು ಬಿಜೆಪಿ ಎತ್ತಿರುವ ಅಕ್ರಮದ ಆಪಾದನೆಯ ಹೋರಾಟವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ.


ಮುಡಾ ಹಗರಣದಲ್ಲಿ ನ್ಯಾಯಾಂಗ ತನಿಖೆಗೆ ನಾವು ಒಪ್ಪುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಮುಡಾ ಹಗರಣ ನ್ಯಾಯಾಂಗ ತನಿಖೆಗೆ ನೀಡಿರುವುದು ಸರಿಯಲ್ಲ. ಸರ್ಕಾರ CBI ತನಿಖೆಗೆ ನೀಡಬೇಕು. ಯಾವುದೇ ಕಾರಣಕ್ಕೂ ನ್ಯಾಯಾಂಗ ತನಿಖೆಯನ್ನು ಒಪ್ಪಲ್ಲ. ಸಿಎಂಗೆ ತಾಕತ್‌ ಇದ್ದರೆ ಇದನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನ್ಯಾಯಾಂಗ ತನಿಖೆ ಅಂತ ನಾಟಕ‌ಮಾಡುತ್ತಿದ್ದಾರೆ. ಇದೊಂದು ದೊಡ್ಡ ಹಗರಣ. ಸದನದ ಒಳಗೆ ಹೊರಗೆ ನಾವು ಹೋರಾಟ ಮಾಡುತ್ತೇವೆ. ಸಿಎಂ ರಾಜೀನಾಮೆ ಕೋಡಬೇಕು. ದಲಿತರ ಹೆಸರಲ್ಲಿ ಅಧಿಕಾರಕ್ಕೆ ಬಂದು ದಲಿತರ ಹಣ ದೋಚಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲಾಗಿದೆ. ಸಿಎಂ ನೈತಿಕತೆ ‌ಕಳೆದುಕೊಂಡಿದ್ದಾರೆ. ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ ಈಗಾಗಲೇ ಇಡಿ‌ ಕಸ್ಟಡಿಯಲ್ಲಿದ್ದಾರೆ. ಸಿಎಂ ಇದಕ್ಕೆ ಉತ್ತರ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ