Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಲರಾಮನ ದಿನಗಳು ಚಿತ್ರಕ್ಕೆ  ಪ್ರಿಯಾ ಆನಂದ್ ನಾಯಕಿ

     ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್  ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ ಆ ದಿನಗಳು ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ  ಚಿತ್ರ 'ಬಲರಾಮನ ದಿನಗಳು'. ಇದು ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ ಕೂಡ. ಈ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

     ರಾಜಕುಮಾರ, ಜೇಮ್ಸ್, ಆರೆಂಜ್, ಕರಟಕ ದಮನಕದಂತಹ ಯಶಸ್ವಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿ ಪ್ರಿಯಾ ಆನಂದ್ ಜನಪ್ರಿಯರಾಗಿದ್ದಾರೆ. ಹೊಸವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕಿ ಪ್ರಿಯಾ ಆನಂದ್ ಅವರಿಗೆ ಚಿತ್ರತಂಡ ಸ್ವಾಗತ ಹೇಳಿದೆ.


     'ಬಲರಾಮನ ದಿನಗಳು' 1980ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬಕ್ಕೆ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಫಸ್ಟ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

     ಅಟ್ಟಕತ್ತಿ,  ಕಾಲ, ಕಬಾಲಿ, ಭೈರವ,  ದಸರಾ, ಕಲ್ಕಿ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿರುವ ಭಾರತದ ಖ್ಯಾತ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇದು ಅವರು ಸಂಗೀತ ಸಂಯೋಜಿಸುತ್ತಿರುವ 51ನೇ ಚಿತ್ರ ಹಾಗೂ ಕನ್ನಡದ ಮೊದಲ ಚಿತ್ರ.


     ಈಗಾಗಲೇ ಚಿತ್ರಕ್ಕೆ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ 15 ರಿಂದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ‌.‌ 'ಬಲರಾಮನ ದಿನಗಳು' ಚಿತ್ರದ ಕುರಿತು ಮತ್ತಷ್ಟು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುವುದಾಗಿ ನಿರ್ಮಾಪಕ ಶ್ರೇಯಸ್ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ