LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬಲರಾಮನ ದಿನಗಳು ಚಿತ್ರಕ್ಕೆ  ಪ್ರಿಯಾ ಆನಂದ್ ನಾಯಕಿ

     ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್  ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ ಆ ದಿನಗಳು ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ  ಚಿತ್ರ 'ಬಲರಾಮನ ದಿನಗಳು'. ಇದು ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ ಕೂಡ. ಈ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

     ರಾಜಕುಮಾರ, ಜೇಮ್ಸ್, ಆರೆಂಜ್, ಕರಟಕ ದಮನಕದಂತಹ ಯಶಸ್ವಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿ ಪ್ರಿಯಾ ಆನಂದ್ ಜನಪ್ರಿಯರಾಗಿದ್ದಾರೆ. ಹೊಸವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕಿ ಪ್ರಿಯಾ ಆನಂದ್ ಅವರಿಗೆ ಚಿತ್ರತಂಡ ಸ್ವಾಗತ ಹೇಳಿದೆ.


     'ಬಲರಾಮನ ದಿನಗಳು' 1980ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬಕ್ಕೆ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಫಸ್ಟ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

     ಅಟ್ಟಕತ್ತಿ,  ಕಾಲ, ಕಬಾಲಿ, ಭೈರವ,  ದಸರಾ, ಕಲ್ಕಿ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿರುವ ಭಾರತದ ಖ್ಯಾತ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇದು ಅವರು ಸಂಗೀತ ಸಂಯೋಜಿಸುತ್ತಿರುವ 51ನೇ ಚಿತ್ರ ಹಾಗೂ ಕನ್ನಡದ ಮೊದಲ ಚಿತ್ರ.


     ಈಗಾಗಲೇ ಚಿತ್ರಕ್ಕೆ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ 15 ರಿಂದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ‌.‌ 'ಬಲರಾಮನ ದಿನಗಳು' ಚಿತ್ರದ ಕುರಿತು ಮತ್ತಷ್ಟು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುವುದಾಗಿ ನಿರ್ಮಾಪಕ ಶ್ರೇಯಸ್ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್