Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಬಾಗ ಮತಕ್ಷೇತ್ರಕ್ಕೆ ಸಚಿವ ಸತೀಶ ಜಾರಕಿಹೊಳಿ ಪ್ರಯತ್ನದಿಂದ 25 ಕೋಟಿ ರೂ. ಅನುದಾನ: ಸಂಸದೆ ಪ್ರಿಯಾಂಕ


ರಾಯಬಾಗ: ಮತಕ್ಷೇತ್ರದ ಜನರ ಆಶಯದಂತೆ ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿಯವರ ಪ್ರಯತ್ನದಿಂದ 25 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಹೇಳಿದರು.


ಬುಧವಾರ ತಾಲೂಕಿನ ಭೆಂಡವಾಡ, ರಾಯಬಾಗ ಮತ್ತು ಜಲಾಲಪುರ ಗ್ರಾಮಗಳಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, 4 ಕೋಟಿ 30 ಲಕ್ಷ ರೂ. ಅನುದಾನದಲ್ಲಿ ಭೆಂಡವಾಡ-ಮೇಖಳಿ ರಸ್ತೆ ಡಾಂಬರೀಕರಣ, ರಸ್ತೆ ಅಗಲೀಕರಣ, ವಿದ್ಯುತ ದೀಪ ಅಳವಡಿಕೆ, 70 ಲಕ್ಷ ರೂ. ಅನುದಾನದಲ್ಲಿ ಮಂಟೂರ-ಕಟಕಬಾವಿ-ದೇವಾಪೂರಹಟ್ಟಿ ರಸ್ತೆ ಡಾಂಬರೀಕರಣ, 12 ಕೋಟಿ ರೂ. ಅನುದಾನದಲ್ಲಿ ರಾಯಬಾಗ-ಕಂಕಣವಾಡಿ ರಸ್ತೆ ಡಾಂಬರೀಕರಣ, ಅಗಲೀಕರಣ ಹಾಗೂ ಜಲಾಲಪುರ ಗ್ರಾಮದಲ್ಲಿ 3 ಕೋಟಿ ರೂ. ಅನುದಾನದಲ್ಲಿ ಭಿರಡಿ-ಬಾವನಸೌಂದತ್ತಿ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ರಸ್ತೆ ಸುಧಾರಣೆ ಜೊತೆಗೆ ಸಾರ್ವಜನಿಕರ ರಾತ್ರಿ ಸಮಯದಲ್ಲಿ ಸಂಚರಿಸಲು ಅನುಕೂಲವಾಗಲು ರಸ್ತೆ ಬದಿಯಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗುತ್ತದೆ ಎಂದರು.

ಶಾಸಕ ಡಿ.ಎಮ್.ಐಹೊಳೆ ಮಾತನಾಡಿ, ನಮ್ಮ ಮನವಿಗೆ ಸ್ಪಂದಿಸಿ ರಾಯಬಾಗ ಮತಕ್ಷೇತ್ರದಲ್ಲಿನ ರಸ್ತೆ ಸುಧಾರಣೆಗೆ


ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರು 25 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ. ಗ್ರಾಮೀಣ ಭಾಗದ ಜನರು ರಸ್ತೆ ಅಗಲೀಕರಣಕ್ಕಾಗಿ ಸಹಕರಿಸಿ, ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿಕೊಳ್ಳಬೇಕೆಂದರು.


ಡಿಸಿಸಿ ಬ್ಯಾಂಕ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ, ಗ್ರಾ.ಪಂ.ಅಧ್ಯಕ್ಷೆ ಅನೀತಾ ದುಪದಾಳೆ,  ಪ.ಪಂ.ಅಧ್ಯಕ್ಷ ಅಶೋಕ ಅಂಗಡಿ, ಜಲಾಲಪೂರ ಗ್ರಾ.ಪಂ.ಅಧ್ಯಕ್ಷೆ ದೀಪಾ ಚೌಗಲಾ, ಪಿಡಬ್ಲ್ಯುಡಿ ಎಇಇ ಆರ್.ಬಿ.ಮನವಡ್ಡರ, ಸದಾಶಿವ ಘೋರ್ಪಡೆ, ಸಿದ್ರಾಮ ಪೂಜಾರಿ, ಶಿವನಗೌಡ ಪಾಟೀಲ, ಸಿದ್ದು ಬಂಡಗರ, ರಾಜು ಶಿರಗಾಂವೆ,  ಸುರೇಶ ಚೌಗಲಾ, ರಾಜು ಜಗದಾಳೆ, ನಾಮದೇವ ಕಾಂಬಳೆ, ಬಸವರಾಜ ಅವ್ವನ್ನವರ, ನಿರ್ಮಲಾ ಪಾಟೀಲ, ಅರ್ಜುನ ನಾಯಿಕವಾಡಿ, ಅರ್ಜುನ ಬಂಡಗಾರ, ಅಣ್ಣಾಸಾಹೇಬ ಸಮಾಜೆ, ವಿವೇಕ ಹಟ್ಟಿಕರ, ರೀಯಾನ ನದಾಫ ಸೇರಿ ಅನೇಕರು ಇದ್ದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ