Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾನತೆ ಸಾರಿದ ಕೀರ್ತಿ ಶ್ರೀ ಬಸವೇಶ್ವರರಿಗೆ ಸಲ್ಲುತ್ತದೆ. ಪ್ರಿಯಾಂಕಾ ಜಾರಕಿಹೊಳಿ 

ಬೆಳಗಾವಿ,11: "ಅಸಮಾನತೆಯಲ್ಲಿ ತೊಳಲಾಡುತ್ತಿದ್ದ ಸಮಾಜದಲ್ಲಿ ಸಮಾನತೆಯನ್ನು 12ನೇ ಶತಮಾನದಲ್ಲಿಯೇ ಸಾರಿದ ಕೀರ್ತಿ ಜಗಜ್ಯೋತಿ ಬಸವೇಶ್ವರರಿಗೆ ಸಲ್ಲುತ್ತದೆ. ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಒದಗಿಸುವ ಮೂಲಕ, ಮಹಿಳಾ ಸಮಾನತೆ ಪ್ರತಿಪಾದಿಸಿದ ಜಗತ್ತಿನ ಮೊದಲ ವ್ಯಕ್ತಿ ಎನಿಸಿದ್ದಾರೆ" ಎಂದು ಯುವ ನಾಯಕಿ ಪ್ರಿಯಾಂಕ ಜಾರಕಿಹೊಳಿ ಹೇಳಿದರು.


ಬೆಳಗಾವಿಯಲ್ಲಿ ರಾಷ್ಟ್ರೀಯ ಬಸವ ದಳದಿಂದ ಬಸವ ಜಯಂತಿಯನ್ನು ಸಂಭ್ರಮ ದಿಂದ ಆಚರಿಸಲಾಯಿತು. ಬಸವ ಜಯಂತಿ ಕಾರ್ಯಕ್ರಮವನ್ನು  ಯುವ ನಾಯಕಿ   ಪ್ರಿಯಾಂಕ ಜಾರಕಿಹೊಳಿ   ಉದ್ಘಾಟಿಸಿ  ಮಾತನಾಡಿದರು.


ಶ್ರೇಷ್ಠ ವಚನಗಳ ಮೂಲಕ ಮಾನವ ಕುಲಕ್ಕೆ ದಾರಿ ತೋರಿದ ಕಾಯಕಯೋಗಿ, ಜಗಜ್ಯೋತಿ ಬಸವೇಶ್ವರರ ಜಯಂತಿಯ  ಭಕ್ತಿಪೂರ್ವಕ ನಮನಗಳು ಎಂದರು.

ಬಸವಣ್ಣ ಅವರು ಜಾತಿ, ಮತ ಭೇದ ತೊಡೆದು ಹಾಕಿ ಎಲ್ಲಾ ಜನಾಂಗವನ್ನು ಒಂದುಗೂಡಿಸುವಲ್ಲಿ ಮಹಾನ್ ಪಾತ್ರ ವಹಿಸಿದ ಧೀಮಂತ ಪುರುಷ. ಮಾನವ ಕುಲಕ್ಕೆ ಅವರು ಮಾನವತಾ ಸಂದೇಶ ನೀಡಿ ಹೋದರು. ದಲಿತರಿಗೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ನೀಡಲು ಅವರು ಪ್ರೇರಣೆಯಾದರು. ಮಹಿಳೆಯರಿಗೆ ಸ್ವಾತಂತ್ರ್ಯ ಮತ್ತು ಸಮಾನತೆ ನೀಡಿ ಅವರ ಏಳಿಗೆಗೆ ಶ್ರಮಿಸಿದ ವಿಶ್ವ ಗುರು ಬಸವಣ್ಣ  ಎಂದು ಹೇಳಿದರು.


ಜಗಜ್ಯೋತಿ ಬಸವಣ್ಣನವರು ನೀಡಿದ ಪ್ರತಿಯೊಂದು ಆಚಾರ, ವಿಚಾರ, ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದುವರೆಸಿಕೊಂಡು ಹೋಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.


ಈ ವೇಳೆ  ರಾಷ್ಟ್ರೀಯ ಬಸವ ದಳ ವತಿಯಿಂದ 50 ಸಾವಿರ ಲೀಟರ್ ಜ್ಯೂಸ್ ನ್ನು ಸಾರ್ವಜನಿಕರಿಗೆ ವಿತರಿಸಲಾಯಿತು . ಈ ಸಂದರ್ಭದಲ್ಲಿ ಮೇಯರ್ ಸವಿತಾ ಕಾಂಬಳೆ , ರಾಜಶೇಖರ್ ಡೋಣಿ , ಬೆಂಡಿಗೇರಿ ,ಆನಂದ ಗುಡಸ್, ಸಂತೋಷ್ ಗುಡಸ್ , ಬಸವರಾಜ ಶಿಗ್ಗಾಂವಿ  ಇತತರು ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ