ರಸಪ್ರಶ್ನೆ ಸ್ಫರ್ಧೆ: ವಿಶ್ರೀಕೃ ವಿವಿಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ
ಬಳ್ಳಾರಿ,ಏ.18 : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಶ್ರೀಕೃವಿವಿಯ ಡಾ.ಬಿ.ಆರ್. ಅಂಬೇಡ್ಕರ್ ತರಬೇತಿ, ಸಂಶೋಧನಾ ಮತ್ತು ವಿಸ್ತರಣ ಕೇಂದ್ರವು ಇತ್ತೀಚೆಗೆ ಆಯೋಜಿಸಿದ್ದ ರಸಪ್ರಶ್ನೆ ಸ್ಫರ್ಧೆ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ರಾಜ್ಯಶಾಸ್ತç ಮತ್ತು ವಾಣಿಜ್ಯಶಾಸ್ತç ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಭಾಗಿತ್ವದಲ್ಲಿ ನಗರದ ಮುನಿಸಿಪಲ್ ಮೈದಾನದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಅವರ ಜಯಂತಿಯAದು ಕಾರ್ಯಕ್ರಮದಲ್ಲಿ ಶಾಸಕರಾದ ನಾರಾ ಭರತ್ರೆಡ್ಡಿ ಅವರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಗೌರವಿಸಿದರು.
ಲಿಡ್ಕರ್ ಅಧ್ಯಕ್ಷ ಮುಂಡರಿಗಿ ನಾಗರಾಜ, ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ವಿವಿಯ ವಿದ್ಯಾರ್ಥಿಗಳಾದ ಚರಣ್ ನಜರೆತ್, ಬಸವರಾಜ್ ಮತ್ತು ಕಾರ್ತಿಕ್ ಕೆ.ಬಿ. (ರಾಜ್ಯಶಾಸ್ತç) ಹಾಗೂ ಅನುಶ್ರೀ ಮತ್ತು ವಿಜಯಲಕ್ಷಿö್ಮ (ವಾಣಿಜ್ಯಶಾಸ್ತç) ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಕ್ಕಾಗಿ ಗೌರವಿಸಲಾಯಿತು.
ವಿವಿಯ ಆಡಳಿತ ವರ್ಗ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.