Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ನೆರಡು ವರ್ಷದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ; ಬಸವರಾಜ ಬೊಮ್ಮಾಯಿ

ಸವಣೂರು 

ಇನ್ನೆರಡು ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಈ ವ್ಯವಸ್ಥೆ ಬದಲಾವಣೆಯಾಗಿ ರೈತ ಪರ ಸರ್ಕಾರ ಬಂದಾಗ ರೈತರ ಮಕ್ಕಳಿಗೆ ವಿದ್ಯಾನಿಧಿ, ರೈತರಿಗೆ ಡೀಸೆಲ್‌ ಸಬ್ಸಿಡಿ, ಬೀಜ ಗೊಬ್ಬರಕ್ಕೆ ಸಹಾಯಧನ ನೀಡುವ ಯೋಜನೆಗಳು ಮತ್ತೆ ಜಾರಿಗೆ ಬರುತ್ತವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಈ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಎಲ್ಲಿ ಭಕ್ತಿ ಇದೆ. ಅಲ್ಲಿ ತಾಯಂದಿರು ಇರುತ್ತಾರೆ. ಭಕ್ತಿ ಸಂಸ್ಕೃತಿ ನಮ್ಮ ಭಾರತದ ತಾಯಿ, ದ್ಯಾಮವ್ವನ ದೇವಸ್ಥಾನ ಸುಂದರವಾಗಿ ನಿರ್ಮಾಣ ಆಗಿದೆ. ಈ ಊರಿನ ಜನರು ಬಹಳ ದೈವ ಭಕ್ತರಿರುವುದರಿಂದ ಎಲ್ಲ ದೇವಸ್ಥಾನಗಳು ನಿರ್ಮಾಣ ಆಗಿವೆ. ಮಾರುತಿ ದೇವಸ್ಥಾನ, ಪರಮೇಶ್ವರ ದೇವಸ್ಥಾನ, ದ್ಯಾಮವ್ವ, ಮಾಯಮ್ಮನ ದೇವಸ್ಥಾನಗಳ ನಿರ್ಮಾಣ ಆಗಿವೆ ಎಂದು ಹೇಳಿದರು. ಇವತ್ತಿನ ದಿನಮಾನಗಳಲ್ಲಿ ಧರ್ಮ ಜಾಗೃತಿ ಬಹಳ ಮುಖ್ಯವಾಗಿದೆ. ನಮ್ಮ ಬದುಕು ಧರ್ಮದಿಂದ ನಡೆಯಬೇಕು.

ನಂಬಿಕೆಯಿಂದ ಶಕ್ತಿ ಬರುತ್ತದೆ

ನ್ಯಾಯ, ನೀತಿ, ಧರ್ಮ ಈ ಮೂರು ಮನಷ್ಯರಿಗೆ ಅತ್ಯಂತ ಅವಶ್ಯಕತೆ ಇರುವ ಗುಣಗಳು. ಧರ್ಮದಿಂದ ನಡೆಯಬೇಕೆಂದರೆ ಧರ್ಮದ ಜಾಗೃತಿ ಬಹಳ ಮುಖ್ಯ. ನಮ್ಮ ಜನರಿಗೆ ದೈವದಿಂದ ಧರ್ಮ ಹೀಗಾಗಿ ದೇವಸ್ಥಾನಗಳು ಬಹಳ ಮುಖ್ಯ, ದೇವಸ್ಥಾನಗಳಿಗೆ ಭಕ್ತರ ನಂಬಿಕೆಯಿಂದ ಶಕ್ತಿ ಬರುತ್ತದೆ. ಎಲ್ಲ ದೇವರ ಕೃಪಾಶೀರ್ವಾದ ನಿಮ್ಮ ನಂಬಿಕೆಯಿಂದ ದೈವದ ಅನುಗ್ರಹದಿಂದ ಈ ಊರಿಗೆ ಒಳ್ಳೆಯದಾಗುತ್ತದೆ. ಈ ಊರಿನಲ್ಲಿ ರೈತರು, ಕಾಯಕಯೋಗಿಗಳಿದ್ದಾರೆ. ಪ್ರಗತಿಪರ ಚಿಂತನೆ ಮಾಡುವ ಯುವಕರಿದ್ದಾರೆ. ಮಹಿಳಾ ಸಂಘಗಳಿವೆ. ನಿಮ್ಮ ಆದಾಯ ಕೃಷಿ ಮೇಲೆ ನಿಂತಿದೆ. ನಿಮ್ಮ ಆದಾಯ ಹೆಚ್ಚಳ ಮಾಡಿಕೊಳ್ಳಬೇಕು ಎಂದು ಹೇಳಿದರು.

ನಾನು ಸಿಎಂ ಇದ್ದಾಗ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ಮಾಡಿದೆ. 8ನೇ ತರಗತಿಯಿಂದ ಪಿಜಿವರೆಗೂ ಸ್ಕಾಲರ್ ಶಿಪ್ ನೀಡುತ್ತಿದ್ದೇವು. ಅದರಿಂದ ಸುಮಾರು 11 ಲಕ್ಷ ಮಕ್ಕಳಿಗೆ ಅನುಕೂಲವಾಗಿತ್ತು. ಆ ಯೋಜನೆ ಈಗ ನಿಂತಿದೆ. ಆದರೆ, ಇನ್ನೆರಡು ವರ್ಷದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಈ ವ್ಯವಸ್ಥೆ ಬದಲಾವಣೆಯಾಗಿ ರೈತರ ಸರ್ಕಾರ ಬಂದಾಗ ಮತ್ತೆ ರೈತ ವಿದ್ಯಾನಿಧಿ, ರೈತರಿಗೆ ಡೀಸೆಲ್ ಸಬ್ಸಿಡಿ, ಬೀಜ ಗೊಬ್ಬರಕ್ಕೆ ಸಹಾಯಧನ ನೀಡುವ ಯೋಜನೆಗಳು ಮತ್ತೆ ಜಾರಿಗೆ ಬರುತ್ತವೆ ಎಂದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ